Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...