Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...