Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...