Homeಮುಖಪುಟಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

ಟೊಮೆಟೊ ದರ ತಗ್ಗಿಸಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಿಂದ ಖರೀದಿಗೆ ಮುಂದಾದ ಕೇಂದ್ರ

- Advertisement -
- Advertisement -

ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಟೊಮೆಟೊ ಖರೀದಿಸಲು ಸಹಕಾರ ಸಂಘಗಳಿಗೆ, ನಾಫೆಡ್ ಮತ್ತು ಎನ್‌ಸಿಸಿಎಫ್‌ಗೆ ಬುಧವಾರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಈ ರಾಜ್ಯಗಳಲ್ಲೇ ಸಾಕಷ್ಟು ಟೊಮೆಟೊ ಲಭ್ಯವಿಲ್ಲ ಹಾಗಾಗಿಯೇ ಇಲ್ಲಿ ಟೊಮೆಟೊ ಬೆಲೆ ಗಗಣಕ್ಕೇರಿದೆ. ಕೇಂದ್ರ ಟೊಮೆಟೊ ಖರೀದಿಸುವುದಾದರೂ ಹೇಗೆ ಎಂಬ ಪ್ರಶ್ನೆ ಮೂಡಿದೆ.

ಕಳೆದ ಕೆಲವು ವಾರಗಳಿಂದ ದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆಲವೆಡೆ ಪ್ರತಿ ಕೆಜಿಗೆ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕಳೆದ ತಿಂಗಳು ದೇಶದಲ್ಲಿ ಟೊಮೆಟೊ ಸರಾಸರಿ ದರ 23.61 ರೂ.

ಕಳೆದ ಕೆಲವು ತಿಂಗಳುಗಳಲ್ಲಿ ಟೊಮೆಟೊಗಳ ಸಗಟು ಬೆಲೆಯಲ್ಲಿ ಭಾರೀ ಕುಸಿತ ಕಂಡಿತ್ತು. ಅನೇಕ ರೈತರು ತಮ್ಮ ಉತ್ಪನ್ನಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ಮಾಡಿದ್ದರು. ಈಗ ಇದು ಟೊಮೆಟೊ ಹೆಚ್ಚಿನ ದರಕ್ಕೆ ಕಾರಣವಾಗಿದೆ.

ಕೆಲ ದಿನಗಳಿಂದ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಟೊಮೆಟೊ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಟೊಮೆಟೊ ಖರೀದಿಸಿ ಪ್ರಮುಖ ಸ್ಥಳಗಳಿಗೆ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ಜುಲೈ 14ರಿಂದ ದೆಹಲಿ-ಎನ್‌ಸಿಆರ್ ಪ್ರದೇಶದ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಚಿಲ್ಲರೆ ಮಳಿಗೆಗಳ ಮೂಲಕ ಟೊಮೆಟೊವನ್ನು ವಿತರಿಸಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ದೇಶದ ಹಲವೆಡೆ ಟೊಮೆಟೊ ಚಿಲ್ಲರೆ ಬೆಲೆ ಕೆಜಿಗೆ 200 ರೂ.ವರೆಗೆ ತಲುಪಿದೆ. ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ (ನಾಫೆಡ್‌) ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ (ಎನ್‌ಸಿಸಿಎಫ್‌) ಟೊಮೆಟೊಗಳನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿವೆ. ನಂತರ ಇವುಗಳನ್ನು ಸಬ್ಸಿಡಿ ದರದಲ್ಲಿ ಸರಕಾರ ಮಾರಾಟ ಮಾಡಲಿದೆ.

ಸಚಿವಾಲಯದ ಪ್ರಕಾರ, ಕಳೆದ ಒಂದು ತಿಂಗಳಲ್ಲಿ ಯಾವ ಪ್ರದೇಶದಲ್ಲಿ ಚಿಲ್ಲರೆ ಬೆಲೆ ಗರಿಷ್ಠ ಏರಿಕೆ ದಾಖಲಾಗಿದೆಯೋ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಈ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಬೆಲೆಗಳು ದೇಶದ ಸರಾಸರಿ ಬೆಲೆಗಿಂತ ಹೆಚ್ಚಿದ್ದಲ್ಲಿ ಕೇಂದ್ರ ಆ ಪ್ರದೇಶಗಳಿಗೆ ಟೊಮೆಟೊ ಬಿಡುಗಡೆ ಮಾಡಲಿದೆ.

ಜುಲೈ-ಆಗಸ್ಟ್ ಮತ್ತು ಅಕ್ಟೋಬರ್-ನವೆಂಬರ್ ತಿಂಗಳುಗಳಲ್ಲಿ ಟೊಮೆಟೊ ಉತ್ಪಾದನೆ ಕಡಿಮೆಯಾಗಿರುತ್ತದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಮುಂಗಾರು ಮಳೆಯಿಂದಾಗಿ, ವಿತರಣೆಯ ಸವಾಲುಗಳ ಕಾರಣಕ್ಕೆ ಪೂರೈಕೆ ಕಡಿಮೆಯಾಗುತ್ತದೆ ಹಾಗೂ ಬೆಲೆಗಳು ಹೆಚ್ಚಾಗುತ್ತವೆ. ಆದರೆ ಈ ಬಾರಿ ಬಿರು ಬಿಸಿಲಿನಿಂದಾಗಿ ಬೇಸಿಗೆಯಲ್ಲೇ ಉತ್ಪಾದನೆ ಕಡಿಮೆಯಾಗಿತ್ತು. ಇದ್ದ ಅಲ್ಪ ಸ್ವಲ್ಪ ಬೆಳೆಗೂ ಹಲವು ರೋಗಗಳು ಬಾಧಿಸಿದ್ದವು. ಇನ್ನೊಂದೆಡೆ ಮುಂಗಾರೂ ತೀರಾ ತಡವಾಗಿ ಆಗಮಿಸಿತು. ಇದರಿಂದ ಉತ್ಪಾದನೆಗೆ ಹೊಡೆತ ಬಿದ್ದಿದೆ.

ಪ್ರಸ್ತುತ, ಗುಜರಾತ್, ಮಧ್ಯ ಪ್ರದೇಶ ಮತ್ತು ಇತರ ಕೆಲವು ರಾಜ್ಯಗಳ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದಿಂದ ಅದರಲ್ಲೂ ಪ್ರಮುಖವಾಗಿ ಇಲ್ಲಿನ ಸತಾರಾ, ನಾರಾಯಣಗಾಂವ್ ಹಾಗೂ ನಾಸಿಕ್‌ನಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಆಂಧ್ರ ಪ್ರದೇಶದ ಮದನಪಲ್ಲಿ (ಚಿತ್ತೂರು)ಯಲ್ಲಿಯೂ ಸಾಕಷ್ಟು ಪೂರೈಕೆ ಇದೆ.

ದೆಹಲಿ-ಎನ್‌ಸಿಆರ್‌ಗೆ ಟೊಮೆಟೊಗಳು ಮುಖ್ಯವಾಗಿ ಹಿಮಾಚಲ ಪ್ರದೇಶದಿಂದ ಹಾಗೂ ಕರ್ನಾಟಕದ ಕೋಲಾರದಿಂದ ಬರುತ್ತದೆ. ಹಿಮಾಚಲ ಪ್ರದೇಶ ಪ್ರವಾಹಕ್ಕೆ ತತ್ತರಿಸಿರುವುದರಿಂದ ಪೂರೈಕೆ ಕಡಿಮೆಯಾಗಿದ್ದರೆ, ಕೋಲಾರದಲ್ಲಿ ಅಗತ್ಯಕ್ಕೆ ಬೇಕಾದಷ್ಟು ಟೊಮೆಟೊ ಲಭ್ಯವಾಗುತ್ತಿಲ್ಲ.

ಇದನ್ನೂ ಓದಿ: ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...