Homeಚಳವಳಿರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

“ಹೌದು ಅಥವಾ ಇಲ್ಲ ಎಂಬ ಉತ್ತರವನ್ನಲ್ಲದೇ ಮತ್ತೇನನ್ನೂ ಬಯಸುವುದಿಲ್ಲ. ಇದನ್ನು ಬಿಟ್ಟು ನಮಗೆ ಬೇರೆ ಮಾರ್ಗವೂ ಇಲ್ಲ. ನಮ್ಮ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿದೆ” ಎಂದು ರೈತ ಮುಖಂಡರು ಪಟ್ಟು ಹಿಡಿದಿದ್ದಾರೆ.

- Advertisement -
- Advertisement -

ಕೇಂದ್ರದ ರೈತವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕಳೆದ ಹಲವು ದಿನಗಳಿಂದ ದೇಶದ ರೈತರು ರಾಷ್ಟ್ರರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ನಿನ್ನೆ ದೇಶದಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್ ಕೂಡ ಬಹುತೇಕ ಯಶಸ್ವಿಯಾಗಿದೆ. ಇದರ ಬೆನ್ನಲ್ಲೇ ನಿನ್ನೆ ಸಂಜೆ ರೈತ ಮುಖಂಡರನ್ನು ಗೃಹ ಸಚಿವ ಅಮಿತ್ ಶಾ ಮಾತುಕತೆಗೆ ಕರೆದಿದ್ದರು. ಆದರೆ ಈ ಮಾತುಕತೆಯೂ ಕೂಡ ವಿಫಲವಾಗಿದೆ.

ಹಲವು ರೈತ ಸಂಘಟನೆಗಳ 13 ಪ್ರತಿನಿಧಿಗಳ ಜತೆಗೆ ಗೃಹಸಚಿವರು ಮಂಗಳವಾರ ರಾತ್ರಿ 8.30ರ ಹೊತ್ತಿಗೆ ನಡೆಸಿದ ಮಾತುಕತೆ ವಿಫಲವಾಗಿದೆ.

ಇದನ್ನೂ ಓದಿ: ಭಾರತ್ ಬಂದ್: ಇದು ರೈತರು-ಕಾರ್ಪೋರೇಟ್‌ ಕಂಪನಿಗಳ ನಡುವಿನ ಹೋರಾಟ – AIKSCC

ಕಳೆದ 13 ದಿನಗಳಿಂದ ದೆಹಲಿಯಲ್ಲಿ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ನಿನ್ನೆ ಭಾರತ್ ಬಂದ್‌ಗೆ ಕರೆ ನೀಡಲಾಗಿತ್ತು. ಈ ನಡುವೆ ನಿನ್ನೆ ಸಂಜೆ ಮಾತುಕತೆಗೆ ಬರುವಂತೆ ಪ್ರತಿಭಟನಾ ನಿರತ ರೈತರಿಗೆ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದರು. ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಲು ಇಂದು ಆರನೇ ಸುತ್ತಿನ ಮಾತುಕತೆಗೆ ಬರುವಂತೆ ಕೇಂದ್ರ ಸರ್ಕಾರ ಕರೆ ನೀಡಿತ್ತು. ಇದಕ್ಕೆ ಒಂದು ದಿನದ ಮೊದಲೇ ಅಮಿತ್ ಶಾ ಅವರ ಈ ನಡೆ ಕುತೂಹಲ ಮೂಡಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸದ ರೈತ ಮುಖಂಡರು, “ಹೌದು ಅಥವಾ ಇಲ್ಲ ಎಂಬ ಉತ್ತರವನ್ನಲ್ಲದೇ ಮತ್ತೇನನ್ನೂ ಬಯಸುವುದಿಲ್ಲ. ಇದನ್ನು ಬಿಟ್ಟು ನಮಗೆ ಬೇರೆ ಮಾರ್ಗವೂ ಇಲ್ಲ. ನಮ್ಮ ಹೋರಾಟದ ಮುಂದೆ ಕೇಂದ್ರ ಸರ್ಕಾರ ತಲೆಬಾಗಿದೆ” ಎಂದು ರೈತ ಮುಖಂಡ ರುದ್ರು ಸಿಂಗ್ ಮಾನ್ಸಾ ಸಿಂಗ್ ದೆಹಲಿ-ಹರಿಯಾಣ ಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ: ರಾಜಕೀಯ ನಿವೃತ್ತಿ ಕೇವಲ ವದಂತಿಯಷ್ಟೇ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ನಿನ್ನೆಯ ಸಭೆಯಲ್ಲಿ ಅಮಿತ್ ಶಾ “ಕಾಯ್ದೆಗಳಿಗೆ ಮಾಡಬಹುದಾದ ತಿದ್ದುಪಡಿಗಳ ಬಗ್ಗೆ ಲಿಖಿತ ಭರವಸೆ ಕೊಡಲಾಗುವುದು” ಎಂದು ಹೇಳಿದ್ದಾರೆ.

ಆದರೆ, “ಕಾಯ್ದೆಗಳನ್ನು ರದ್ದು ಮಾಡಬೇಕು ಎಂಬುದು ನಮ್ಮ ಬೇಡಿಕೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ಜತೆಗೆ ಮುಂದಿನ ಹಂತದ ಮಾತುಕತೆಯ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು” ಎಂದು ರೈತ ಮುಖಂಡ ಹನ್ನನ್‌ ಮೊಲ್ಲಾ ಸಭೆಯ ಬಳಿಕ ಹೇಳಿದ್ದಾರೆ.

ಇಂದು ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರೊಂದಿಗೆ ಇಮದು ಆರನೇ ಸುತ್ತಿನ ಮಾತುಕತೆ ನಡೆಸಬೇಕಾಗಿತ್ತು. ಆದರೆ ಇಂದಿನ ಸಭೆಯು ರದ್ದಾಗಿದೆ.


ಇದನ್ನೂ ಓದಿ: ಭೂ ಸುದಾರಣೆ ಕಾಯ್ದೆ ತಿದ್ದುಪಡಿಗೆ ಅಂಗೀಕಾರ ವಿರೋಧಿಸಿ ಪ್ರತಿಭಟನೆ: ಹೋರಾಟಗಾರರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...