Homeಕರ್ನಾಟಕಬೆಂಗಳೂರು: ಮರ ಕಡಿಯದಂತೆ ಸರ್ಕಾರಿ ಶಾಲಾ ಮಕ್ಕಳಿಂದ ಅಪ್ಪಿಕೊ ಚಳವಳಿ

ಬೆಂಗಳೂರು: ಮರ ಕಡಿಯದಂತೆ ಸರ್ಕಾರಿ ಶಾಲಾ ಮಕ್ಕಳಿಂದ ಅಪ್ಪಿಕೊ ಚಳವಳಿ

- Advertisement -
- Advertisement -

ತಮ್ಮ ಶಾಲಾ ಆವರಣದ ಆಟದ ಮೈದಾನದಲ್ಲಿರುವ ಮರಗಳನ್ನು ಕಡಿಯದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಅಪ್ಪಿಕೊ ಚಳವಳಿ ರೀತಿಯಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನ ಪೀಣ್ಯ ದಾಸರಹಳ್ಳಿಯ ಅಬ್ಬಿಗೆರೆಯಲ್ಲಿ ನಡೆದಿದೆ. ಅಬ್ಬಿಗೆರೆ ಸರ್ಕಾರಿ ಶಾಲಾ ಮಕ್ಕಳು ಇಂತಹ ಒಂದು ಸಾಹಸಕ್ಕೆ ಕೈಹಾಕಿದ್ದಾರೆ.

ಏಕಾಏಕಿ ರಸ್ತೆ ವಿಸ್ತರಣೆ ಹೆಸರಿನಲ್ಲಿ ಮರಗಳನ್ನು ಕಡಿಯಲು ಬಿಬಿಎಂಪಿ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಅಬ್ಬಿಗೆರೆ ಸರಕಾರಿ ಶಾಲಾ ಮಕ್ಕಳು ಕೈಯಲ್ಲಿ ಶಾಲಾ ಆವರಣದಲ್ಲಿನ ಮರಗಳನ್ನು ಕಡಿಯದಂತೆ ನಾಮಫಲಕಗಳನ್ನು ಹಿಡಿದು, ಮರಗಳನ್ನು ಸುತ್ತುವರಿದು ಪ್ಪಿಕೋ ಚಳವಳಿ ನಡೆಸಿ, ಮರ ಕಡಿಯದಂತೆ  ಮನವಿ ಮಾಡಿದ್ದಾರೆ.

ಸರ್ಕಾರಿ ಶಾಲಾ ಆವರಣದಲ್ಲಿರುವ ಮೈದಾನದಲ್ಲಿ 100ಕ್ಕೂ ಹೆಚ್ಚು ಮರಗಳಿವೆ. ಅಬ್ಬಿಗೆರೆಯಿಂದ ಚಿಕ್ಕಬಾಣಾವರಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಗಲೀಕರಣ ಮಾಡಲು ಪಾಲಿಕೆ ಅಧಿಕಾರಿಗಳು, ಕಾಂಟ್ರಾಕ್ಟರ್ ಗಳು ಮುಂದಾಗಿದ್ದಾರೆ. ಈ ಅಗಲೀಕರಣ ಅವೈಜ್ಞಾನಿಕವಾಗಿದ್ದು ಯಾವುದೇ ಕಾರಣಕ್ಕೂ ಮುಂದುವರೆಸದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜಕಾರಣಿಗಳ ಬಗ್ಗೆ ತೇಜಸ್ವಿಯರಿಗೆ ಒಳ್ಳೆಯ ಅಭಿಪ್ರಾಯ ಇರಲಿಲ್ಲ; ಆದರೆ, ನನ್ನ ಬಗ್ಗೆ ಪ್ರೀತಿ, ಅಭಿಮಾನವಿತ್ತು-ಸಿದ್ದರಾಮಯ್ಯ

ಈ ಮರಗಳು ಸುಮಾರು 15 ರಿಂದ 20 ವರ್ಷದ ಮರಗಳಾಗಿದ್ದು, ಆಮ್ಲಜನಕ ಎತೇಚ್ಛವಾಗಿ ಪೂರೈಸುವ ಮರಗಳಾಗಿವೆ. ಈ ಸರ್ಕಾರಿ ಶಾಲೆ ಕೂಡ 30 ವರ್ಷ ಹಳೆಯದಾಗಿದೆ. ಶಾಲಾ ಆವರಣದಲ್ಲಿರುವ ಮರಗಳನ್ನು ತೆರವುಗೊಳಿಸುವ ಕುರಿತು ಶಿಕ್ಷಣ ಇಲಾಖೆ ಅಥವಾ ಅರಣ್ಯ ಇಲಾಖೆಯಾಗಲಿ ಯಾವುದೇ ಸೂಚನೆ ನೋಟಿಸ್ ನೀಡಿಲ್ಲ ಎಂದು ಶಿಕ್ಷಕರು, ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಕುರಿತು ಸ್ಥಳೀಯ ಶಾಸಕರು, ಮಾಜಿ ಪಾಲಿಕೆ ಸದಸ್ಯರಿಗೆ ಮನವಿ ಸಲ್ಲಿಸಲಾಗಿದೆ ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ಪೀಣ್ಯ ದಾಸರಹಳ್ಳಿ ವಿಭಾಗದ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಅಪ್ಪಿಕೊ ಚಳವಳಿ ನೇತಾರ ಸುಂದರರಾಲ್ ಬಹುಗುಣ ಅವರಿಗೆ ‘ಭಾರತ ರತ್ನ’ ಶಿಫಾರಸ್ಸು ಮಾಡಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...