Homeಮುಖಪುಟ'ನೆರಳಿನಿಂದ ನಕ್ಷತ್ರದವರೆಗೆ..'; ರೋಹಿತ್ ವೇಮುಲಾ 8ನೇ ವರ್ಷದ ಸ್ಮರಣೆ

‘ನೆರಳಿನಿಂದ ನಕ್ಷತ್ರದವರೆಗೆ..’; ರೋಹಿತ್ ವೇಮುಲಾ 8ನೇ ವರ್ಷದ ಸ್ಮರಣೆ

- Advertisement -
- Advertisement -

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೂ ಕಳೆದಿರಲಿಲ್ಲ; ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಆತ್ಮಹತ್ಯೆಗೆ ಶರಣಾಗಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಭಿಮಾನಿಯಾಗಿದ್ದ, ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಬೇಕು ಎಂದುಕೊಂಡಿದ್ದ ರೋಹಿತ್ ಸಾವಿನ ಸುದ್ದಿ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ದೇಶದ ಲಕ್ಷಾಂತರ ಜನರ; ಮುಖ್ಯವಾಗಿ, ಯುವ ಸಮೂಹದ ಕಣ್ಣೀರಿಗೆ ಕಾರಣವಾಗಿತ್ತು.

ದಲಿತ ವಿದ್ಯಾರ್ಥಿಗಳಿಗೆ ನೆರವು ನೀಡುವಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿದ್ದ ತಾರತಮ್ಯ ಹಾಗೂ ವಿವಿಗಳ ಕೇಸರೀಕರಣದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದ ರೋಹಿತ್ ವೇಮುಲ ಬರೆದಿದ್ದ ಕೊನೆಯ ಪತ್ರ ಪ್ರತಿಯೊಬ್ಬರ ಕರುಳನ್ನೂ ಕಿವುಚಿತ್ತು.

26 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದ ರೋಹಿತ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ತಮ್ಮ ಸೀನಿಯರ್ ಒಬ್ಬರ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘದ ಸದಸ್ಯರಾಗಿದ್ದರು, ಇದು ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡುತ್ತದೆ. ವಿಶ್ವವಿದ್ಯಾನಿಲಯದ ವಸತಿ ಸೌಲಭ್ಯದಿಂದ ಹೊರಹಾಕುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಐವರು ದಲಿತ ವಿದ್ಯಾರ್ಥಿಗಳಲ್ಲಿ ಇವರೂ ಒಬ್ಬರಾಗಿದ್ದು, ಹಾಸ್ಟೆಲ್‌ನಿಂದ ಹೊರಬರುತ್ತಿರುವ ಫೋಟೋಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದವು.

ಬಿಜೆಪಿಯ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯನ ಮೇಲೆ ಅವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನೂ ರೋಹಿತ್ ಎದುರಿಸಿದ್ದರು. ಆದರೆ, ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆ ನಂತರ ಕ್ಲೀನ್‌ಚಿಟ್ ನೀಡಿದರೂ, ಡಿಸೆಂಬರ್‌ ಹೊತ್ತಿಗೆ ತನ್ನ ನಿರ್ಧಾರವನ್ನು ಬದಲಾಯಿಸಿತು.

‘ರೋಹಿತ್ ಕಠಿಣ ಪರಿಶ್ರಮಿ, ಅದ್ಭುತ ವಿದ್ಯಾರ್ಥಿ ಮತ್ತು ಸಹೃದಯ ಆತ್ಮ’ ಎಂದು ಅವರ ಆತ್ಮೀಯ ಸ್ನೇಹಿತರಾಗಿದ್ದ ಪಿ ವಿಜಯ್ ಹೇಳಿದ್ದರು. ‘ಅವರು ತಮ್ಮ ಹೆಚ್ಚಿನ ಸಮಯವನ್ನು ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಕಳೆಯುತ್ತಿದ್ದರು’ ಎಂದು ಅವರ ಮರಣದ ನಂತರ ಹೇಳಿದ್ದರು.

ರೋಹಿತ್ ಸಾವಿನ ನಂತರ ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ, ಹಲವು ವಿಶ್ವವಿದ್ಯಾಲಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದವು. ಸಂಸತ್ತಿನ ಅಧಿವೇಶನದಲ್ಲಿ ಹಲವು ದಿನಗಳ ಕಾಲ ರೋಹಿತ್ ಸಾವಿನ ವಿಚಾರವಾಗಿ ಚರ್ಚೆಗಳು ನಡೆದು, ಅಂದಿನ ಮಾನವ ಸಂಪನ್ಮೂಲ ಸಚಿವರಾಗಿದ್ದ ಸ್ಮೃತಿ ಇರಾನಿ ಅವರನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಇಂದಿಗೆ (17-01-2016; 17-01-2024) ರೋಹಿತ್ ನಮ್ಮನ್ನೆಲ್ಲಾ ದೈಹಿಕವಾಗಿ ಅಗಲಿ, ಮನಸ್ಸಿನಿಂದ ಅಪ್ಪಿಕೊಂಡು ಎಂಟು ವರ್ಷ ಕಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದು ಲಕ್ಷಾಂತರ ಜನ ರೋಹಿತ್ ನೆನಪಿಸಿಕೊಂಡು ಪೋಸ್ಟ್ ಮಾಡುತ್ತಿದ್ದಾರೆ. ಆತ ಕೊನೆಯದಾಗಿ ಬರೆದ ಡೆತ್ ನೋಟ್‌ನ ಸಾಲುಗಳನ್ನು ಹಂಚಿಕೊಂಡಿದ್ದಾರೆ.

ರೋಹಿತ್ ವೇಮುಲ ಕೊನೆಯದಾಗಿ ಬರೆದ ಡೆತ್ ನೋಟ್:

ಶುಭ ಮುಂಜಾನೆ…

ನೀವು ಈ ಪತ್ರವನ್ನು ಓದುವಾಗ ನಾನಿರುವುದಿಲ್ಲ, ಕೋಪ ಮಾಡಿಕೊಳ್ಳಬೇಡಿ. ನನಗೆ ಗೊತ್ತು, ನಿಮ್ಮಲ್ಲಿ ಹಲವರು ನಿಜಕ್ಕೂ ನನ್ನ ಬಗ್ಗೆ ಕಾಳಜಿ ತೋರಿದಿರಿ, ಪ್ರೀತಿಸಿದಿರಿ ಮತ್ತು ಉತ್ತಮವಾಗಿ ನೋಡಿಕೊಂಡಿರಿ. ಯಾರ ಮೇಲೂ ನನಗೆ ದೂರುಗಳಿಲ್ಲ. ಯಾವಾಗಲೂ ನನಗೆ ಸಮಸ್ಯೆಯಿದ್ದಿದ್ದು ನನ್ನೊಂದಿಗೇನೇ, ನನ್ನ ದೇಹ ಮತ್ತು ಆತ್ಮದ ನಡುವಿನ ಕಂದಕ ದೊಡ್ಡದಾಗುತ್ತಿರುವ ಭಾವನೆ ಮತ್ತು ನಾನು ರಾಕ್ಷಸನಾಗಿಬಿಟ್ಟಿದ್ದೇನೆ.

ಒಬ್ಬ ಬರಹಗಾರನಾಗಬೇಕೆಂಬುದು ಯಾವಾಗಲೂ ನನ್ನ ಬಯಕೆಯಾಗಿತ್ತು. ಕಾರ್ಲ್ ಸಗಾನ್‌ನಂತೆ, ವಿಜ್ಞಾನದ ಬರಹಗಾರನಾಗಬಯಸಿದ್ದೆ. ಕೊನೆಗೆ. ಇದೊಂದು ಪತ್ರವನ್ನು ಮಾತ್ರ ನನ್ನಿಂದ ಬರೆಯಲಾಗುತ್ತಿರುವುದು.
ನಾನು ವಿಜ್ಞಾನ, ನಕ್ಷತ್ರ, ಪ್ರಕೃತಿಯನ್ನು ಪ್ರೀತಿಸಿದೆ. ಆದರೆ, ಪ್ರಕೃತಿಯಿಂದ ಮನುಷ್ಯರು ವಿಚ್ಛೇದನ ಪಡೆದು ಬಹಳ ಕಾಲವಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ. ನಮ್ಮ ಭಾವನೆಗಳೆಲ್ಲ ಸೆಕೆಂಡ್ ಹ್ಯಾಂಡು. ಪ್ರೀತಿಯನ್ನು ಇಲ್ಲಿ ಕಟ್ಟಿಕೊಡಲಾಗಿದ್ದು, ನಂಬಿಕೆಗಳಿಗೆ ಬಣ್ಣ ಬಳಿಯಲಾಗಿದೆ. ನಮ್ಮ ಸ್ವಂತಿಕೆಗೆ ಇಲ್ಲಿ ಬೆಲೆ ಬರುವುದೇ ಕೃತಕ ಕಲೆಯಿಂದ. ನೋವುಣ್ಣದೆ ಪ್ರೀತಿಸುವುದು ನಿಜಕ್ಕೂ ಕಷ್ಟಕರವಾಗಿಬಿಟ್ಟಿದೆ. ಅದು ಅಧ್ಯಯನ ಕ್ಷೇತ್ರದಲ್ಲಿರಲಿ, ಬೀದಿಗಳಲ್ಲಿರಲಿ, ರಾಜಕೀಯದಲ್ಲಿರಲಿ. ಸಾವಿನಲ್ಲೇ ಇರಲಿ ಅಥವಾ ಬದುಕಿನಲ್ಲೇ ಇರಲಿ; ಮನುಷ್ಯನ ಮೌಲ್ಯ ಎಂಬುದು ಅವನ ತತ್ಕ್ಷಣದ ಅಸ್ಮಿತೆ ಮತ್ತು ಸಮೀಪದ ಯಾವುದೋ ಒಂದು ಸಾಧ್ಯತೆಯ ಮಟ್ಟಕ್ಕಷ್ಟೇ ಇಳಿದುಬಿಟ್ಟಿದೆ. ಒಂದು ವೋಟಿಗೆ. ಒಂದು ಸಂಖ್ಯೆಗೆ ಒಂದು ವಸ್ತುವಿಗೆ. ಅಷ್ಟೆ. ಮನುಷ್ಯನನ್ನು ಅವನ ಮನಸ್ಸಿನ ಮೂಲಕ ಎಂದೂ ಪರಿಗಣಿಸಲಿಲ್ಲ. ನಭೋಮಂಡಲದ ನಕ್ಷತ್ರಗಳ ಧೂಳಿನಿಂದ ಮಾಡಲ್ಪಟ್ಟ ಅತ್ಯದ್ಭುತ ವಸ್ತುವಿನಂತೆ ಎಂದೂ ಅವನನ್ನು ಗುರುತಿಸಲಿಲ್ಲ.

ಈ ರೀತಿಯ ಪತ್ರವನ್ನು ಮೊದಲ ಬಾರಿಗೆ ಬರೆಯುತ್ತಿದ್ದೇನೆ. ಇದು ಅಂತಿಮ ಪತ್ರದ ಮೊದಲ ಯತ್ನ. ಏನಾದರೂ ತಪ್ಪಾಗಿ ಬರೆದಿದ್ದರೆ ಮನ್ನಿಸಿ. ಬಹುಶಃ ಪ್ರಪಂಚವನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾನು ಎಡವಿದೆ. ಪ್ರೀತಿ, ನೋವು, ಬದುಕು, ಸಾವು ಇವನ್ನೆಲ್ಲಾ ಅರ್ಥ ಮಾಡಿಕೊಳ್ಳುವಲ್ಲಿ ಸೋತೆ. ಆತುರವೇನಿರಲಿಲ್ಲ. ನಾನು ಓಡುತ್ತಲೇ ಇದ್ದೆ. ಬದುಕು ಪ್ರಾರಂಭಿಸುವ ಹತಾಶೆಯಿಂದ ಓಡುತ್ತಿದ್ದೆ. ಕೆಲವರಿಗೆ ಬದುಕೇ ಒಂದು ಶಾಪ. ನನಗೆ, ನನ್ನ ಹುಟ್ಟೇ ನನಗೆ ಮಾರಣಾಂತಿಕ ಅಪಘಾತ. ನನ್ನ ಬಾಲ್ಯದ ಏಕಾಂಗಿತನದಿಂದ ನಾನೆಂದೂ ಚೇತರಿಸಿಕೊಳ್ಳಲಾರೆ. ನನ್ನ ಗತದಿಂದ ಬಂದ ಪಾಪಿ ಕೂಸು ನಾನು.

ಈ ಕ್ಷಣದಲ್ಲಿ ನನಗೆ ನೋವಾಗುತ್ತಿಲ್ಲ. ದುಃಖವಾಗುತ್ತಿಲ್ಲ; ಖಾಲಿ ಖಾಲಿ ಅನಿಸುತ್ತಿದೆ. ನನ್ನ ಬಗ್ಗೆ ನನಗೇ ಕಾಳಜಿಯಿಲ್ಲದಾಗಿದೆ. ಇದು ಅಸಹ್ಯ; ಹಾಗಾಗಿ ಈ ಕೆಲಸ ಮಾಡುತ್ತಿದ್ದೇನೆ. ಜನರು ನನ್ನನ್ನು ಹೇಡಿಯೆಂದು ಜರಿಯಬಹುದು. ನಾನು ಹೋದ ಮೇಲೆ ಸ್ವಾರ್ಥಿ, ಮೂರ್ಖ ಎನ್ನಬಹುದು. ಅದರ ಬಗ್ಗೆಯೇನೂ ಚಿಂತೆಯಿಲ್ಲ. ಪುನರ್ ಜನ್ಮದ ಕತೆಗಳಲ್ಲಿ, ಭೂತ, ಪಿಶಾಚಿಗಳಿರುವುದರಲ್ಲಿ ನನಗೆ ನಂಬಿಕೆಯಿಲ್ಲ. ಏನಾದರೂ ನಂಬುವುದಿದ್ದರೆ ಅದು ನಾನು ತಾರೆಗಳವರೆಗೆ ಪ್ರಯಾಣಿಸಬಲ್ಲೆನೆಂಬುದನ್ನು ಮಾತ್ರ ಮತ್ತು ಇತರ ಪ್ರಪಂಚಗಳ ಬಗ್ಗೆ ತಿಳಿದುಕೊಳ್ಳಬಲ್ಲೆ ಎಂಬುದನ್ನು ಮಾತ್ರವೇ.

ಈ ಪತ್ರ ಓದುತ್ತಿರುವ ನೀವು ನನಗೇನಾದರೂ ಮಾಡಬಹುದಾದರೆ, ಕಳೆದ ಏಳು ತಿಂಗಳಿನ ಫೆಲೋಶಿಪ್ ಹಣ ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿ ಇನ್ನೂ ಬರಬೇಕಿದೆ. ಅದು ನನ್ನ ಕುಟುಂಬದವರಿಗೆ ತಲುಪುವಂತೆ ಮಾಡಿ. ರಾಮ್ಜಿಗೆ ನಲವತ್ತು ಸಾವಿರದಷ್ಟು ಕೊಡಬೇಕಿದೆ. ಅವನು ವಾಪಸ್ ಕೇಳಿಲ್ಲ. ದಯವಿಟ್ಟು ನನಗೆ ಬರುವ ಹಣದಲ್ಲಿ ಅವನ ಹಣವನ್ನು ಕೊಟ್ಟುಬಿಡಿ. ನನ್ನ ಅಂತ್ಯಕ್ರಿಯೆ ಶಾಂತವಾಗಿ, ಸುಗಮವಾಗಿ ನಡೆಯಲಿ. ಹಿಂಗೆ ಕಾಣಿಸಿಕೊಂಡು ಹಂಗೆ ಮರೆಯಾಗಿಬಿಟ್ಟ ಎನ್ನುವಂತೆ ವರ್ತಿಸಿ. ನನಗಾಗಿ ಕಣ್ಣೀರು ಬೇಡ. ಜೀವಂತವಾಗಿದ್ದಾಗ ಇರುವುದಕ್ಕಿಂತಲೂ ಸತ್ತಮೇಲೆಯೇ ನಾನು ಖುಷಿಯಾಗಿರುತ್ತೇನೆ ಎನ್ನುವುದು ಗೊತ್ತಿರಲಿ; ಮಬ್ಬುಗತ್ತಲೆಯಿಂದ ತಾರೆಗಳೆಡೆಗೆ.

ಉಮಾ ಅಣ್ಣ, ಈ ಕೆಲಸಕ್ಕೆ ನಿಮ್ಮ ಕೋಣೆಯನ್ನು ಉಪಯೋಗಿಸಿದ್ದಕ್ಕೆ ಕ್ಷಮೆ ಇರಲಿ. ‘ಆಸಾ’ ಕುಟುಂಬಕ್ಕೆ ನಿರಾಸೆ ಮೂಡಿಸಿದ್ದಕ್ಕೆ ಕ್ಷಮೆ ಕೋರುತ್ತೇನೆ. ನೀವೆಲ್ಲರೂ ನನ್ನನ್ನು ತುಂಬಾ ಪ್ರೀತಿಸಿದಿರಿ. ನಿಮ್ಮೆಲ್ಲರ ಉಜ್ವಲ ಭವಿಷ್ಯಕ್ಕೆ ಹಾರೈಸುತ್ತಿದ್ದೇನೆ. ಇದೋ ಕೊನೆಯ ಒಂದು ಸಲ, ಜೈ ಭೀಮ್.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್‌ನಿಂದ ಹೊರಬರುತ್ತಿರುವ ರೋಹಿತ್ ವೇಮುಲ

ಫಾರ್ಮಾಲಿಟಿಗಳನ್ನು ಬರೆಯುವುದನ್ನು ಮರೆತುಬಿಟ್ಟೆ. ನನ್ನ ಸಾವಿಗೆ ಯಾರೂ ಹೊಣೆಗಾರರಲ್ಲ. ಯಾರೂ ನನ್ನನ್ನು ತಮ್ಮ ಕೃತ್ಯಗಳಿಂದಾಗಲೀ, ಮಾತಿನಿಂದಾಗಲೀ ಇದಕ್ಕೆ ಉತ್ತೇಜಿಸಲಿಲ್ಲ. ಇದು ನನ್ನ ನಿರ್ಧಾರ ಮತ್ತು ಇದಕ್ಕೆ ನಾನೊಬ್ಬನೇ ಜವಾಬ್ದಾರ. ನಾನು ಹೋದ ಮೇಲೆ ಈ ವಿಷಯವಾಗಿ ನನ್ನ ಸ್ನೇಹಿತರಿಗೆ ಮತ್ತು ಶತ್ರುಗಳಿಗೆ ತೊಂದರೆ ಕೊಡಬೇಡಿ.

ಇದನ್ನೂ ಓದಿ; ಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...