Homeಮುಖಪುಟ'ನೆರಳಿನಿಂದ ನಕ್ಷತ್ರದವರೆಗೆ..'; ರೋಹಿತ್ ವೇಮುಲಾ 8ನೇ ವರ್ಷದ ಸ್ಮರಣೆ

‘ನೆರಳಿನಿಂದ ನಕ್ಷತ್ರದವರೆಗೆ..’; ರೋಹಿತ್ ವೇಮುಲಾ 8ನೇ ವರ್ಷದ ಸ್ಮರಣೆ

- Advertisement -
- Advertisement -

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೂ ಕಳೆದಿರಲಿಲ್ಲ; ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಆತ್ಮಹತ್ಯೆಗೆ ಶರಣಾಗಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಭಿಮಾನಿಯಾಗಿದ್ದ, ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಬೇಕು ಎಂದುಕೊಂಡಿದ್ದ ರೋಹಿತ್ ಸಾವಿನ ಸುದ್ದಿ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ದೇಶದ ಲಕ್ಷಾಂತರ ಜನರ; ಮುಖ್ಯವಾಗಿ, ಯುವ ಸಮೂಹದ ಕಣ್ಣೀರಿಗೆ ಕಾರಣವಾಗಿತ್ತು.

ದಲಿತ ವಿದ್ಯಾರ್ಥಿಗಳಿಗೆ ನೆರವು ನೀಡುವಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿದ್ದ ತಾರತಮ್ಯ ಹಾಗೂ ವಿವಿಗಳ ಕೇಸರೀಕರಣದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದ ರೋಹಿತ್ ವೇಮುಲ ಬರೆದಿದ್ದ ಕೊನೆಯ ಪತ್ರ ಪ್ರತಿಯೊಬ್ಬರ ಕರುಳನ್ನೂ ಕಿವುಚಿತ್ತು.

26 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದ ರೋಹಿತ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ತಮ್ಮ ಸೀನಿಯರ್ ಒಬ್ಬರ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘದ ಸದಸ್ಯರಾಗಿದ್ದರು, ಇದು ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡುತ್ತದೆ. ವಿಶ್ವವಿದ್ಯಾನಿಲಯದ ವಸತಿ ಸೌಲಭ್ಯದಿಂದ ಹೊರಹಾಕುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಐವರು ದಲಿತ ವಿದ್ಯಾರ್ಥಿಗಳಲ್ಲಿ ಇವರೂ ಒಬ್ಬರಾಗಿದ್ದು, ಹಾಸ್ಟೆಲ್‌ನಿಂದ ಹೊರಬರುತ್ತಿರುವ ಫೋಟೋಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದವು.

ಬಿಜೆಪಿಯ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯನ ಮೇಲೆ ಅವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನೂ ರೋಹಿತ್ ಎದುರಿಸಿದ್ದರು. ಆದರೆ, ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆ ನಂತರ ಕ್ಲೀನ್‌ಚಿಟ್ ನೀಡಿದರೂ, ಡಿಸೆಂಬರ್‌ ಹೊತ್ತಿಗೆ ತನ್ನ ನಿರ್ಧಾರವನ್ನು ಬದಲಾಯಿಸಿತು.

‘ರೋಹಿತ್ ಕಠಿಣ ಪರಿಶ್ರಮಿ, ಅದ್ಭುತ ವಿದ್ಯಾರ್ಥಿ ಮತ್ತು ಸಹೃದಯ ಆತ್ಮ’ ಎಂದು ಅವರ ಆತ್ಮೀಯ ಸ್ನೇಹಿತರಾಗಿದ್ದ ಪಿ ವಿಜಯ್ ಹೇಳಿದ್ದರು. ‘ಅವರು ತಮ್ಮ ಹೆಚ್ಚಿನ ಸಮಯವನ್ನು ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಕಳೆಯುತ್ತಿದ್ದರು’ ಎಂದು ಅವರ ಮರಣದ ನಂತರ ಹೇಳಿದ್ದರು.

ರೋಹಿತ್ ಸಾವಿನ ನಂತರ ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ, ಹಲವು ವಿಶ್ವವಿದ್ಯಾಲಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದವು. ಸಂಸತ್ತಿನ ಅಧಿವೇಶನದಲ್ಲಿ ಹಲವು ದಿನಗಳ ಕಾಲ ರೋಹಿತ್ ಸಾವಿನ ವಿಚಾರವಾಗಿ ಚರ್ಚೆಗಳು ನಡೆದು, ಅಂದಿನ ಮಾನವ ಸಂಪನ್ಮೂಲ ಸಚಿವರಾಗಿದ್ದ ಸ್ಮೃತಿ ಇರಾನಿ ಅವರನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಇಂದಿಗೆ (17-01-2016; 17-01-2024) ರೋಹಿತ್ ನಮ್ಮನ್ನೆಲ್ಲಾ ದೈಹಿಕವಾಗಿ ಅಗಲಿ, ಮನಸ್ಸಿನಿಂದ ಅಪ್ಪಿಕೊಂಡು ಎಂಟು ವರ್ಷ ಕಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದು ಲಕ್ಷಾಂತರ ಜನ ರೋಹಿತ್ ನೆನಪಿಸಿಕೊಂಡು ಪೋಸ್ಟ್ ಮಾಡುತ್ತಿದ್ದಾರೆ. ಆತ ಕೊನೆಯದಾಗಿ ಬರೆದ ಡೆತ್ ನೋಟ್‌ನ ಸಾಲುಗಳನ್ನು ಹಂಚಿಕೊಂಡಿದ್ದಾರೆ.

ರೋಹಿತ್ ವೇಮುಲ ಕೊನೆಯದಾಗಿ ಬರೆದ ಡೆತ್ ನೋಟ್:

ಶುಭ ಮುಂಜಾನೆ…

ನೀವು ಈ ಪತ್ರವನ್ನು ಓದುವಾಗ ನಾನಿರುವುದಿಲ್ಲ, ಕೋಪ ಮಾಡಿಕೊಳ್ಳಬೇಡಿ. ನನಗೆ ಗೊತ್ತು, ನಿಮ್ಮಲ್ಲಿ ಹಲವರು ನಿಜಕ್ಕೂ ನನ್ನ ಬಗ್ಗೆ ಕಾಳಜಿ ತೋರಿದಿರಿ, ಪ್ರೀತಿಸಿದಿರಿ ಮತ್ತು ಉತ್ತಮವಾಗಿ ನೋಡಿಕೊಂಡಿರಿ. ಯಾರ ಮೇಲೂ ನನಗೆ ದೂರುಗಳಿಲ್ಲ. ಯಾವಾಗಲೂ ನನಗೆ ಸಮಸ್ಯೆಯಿದ್ದಿದ್ದು ನನ್ನೊಂದಿಗೇನೇ, ನನ್ನ ದೇಹ ಮತ್ತು ಆತ್ಮದ ನಡುವಿನ ಕಂದಕ ದೊಡ್ಡದಾಗುತ್ತಿರುವ ಭಾವನೆ ಮತ್ತು ನಾನು ರಾಕ್ಷಸನಾಗಿಬಿಟ್ಟಿದ್ದೇನೆ.

ಒಬ್ಬ ಬರಹಗಾರನಾಗಬೇಕೆಂಬುದು ಯಾವಾಗಲೂ ನನ್ನ ಬಯಕೆಯಾಗಿತ್ತು. ಕಾರ್ಲ್ ಸಗಾನ್‌ನಂತೆ, ವಿಜ್ಞಾನದ ಬರಹಗಾರನಾಗಬಯಸಿದ್ದೆ. ಕೊನೆಗೆ. ಇದೊಂದು ಪತ್ರವನ್ನು ಮಾತ್ರ ನನ್ನಿಂದ ಬರೆಯಲಾಗುತ್ತಿರುವುದು.
ನಾನು ವಿಜ್ಞಾನ, ನಕ್ಷತ್ರ, ಪ್ರಕೃತಿಯನ್ನು ಪ್ರೀತಿಸಿದೆ. ಆದರೆ, ಪ್ರಕೃತಿಯಿಂದ ಮನುಷ್ಯರು ವಿಚ್ಛೇದನ ಪಡೆದು ಬಹಳ ಕಾಲವಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ. ನಮ್ಮ ಭಾವನೆಗಳೆಲ್ಲ ಸೆಕೆಂಡ್ ಹ್ಯಾಂಡು. ಪ್ರೀತಿಯನ್ನು ಇಲ್ಲಿ ಕಟ್ಟಿಕೊಡಲಾಗಿದ್ದು, ನಂಬಿಕೆಗಳಿಗೆ ಬಣ್ಣ ಬಳಿಯಲಾಗಿದೆ. ನಮ್ಮ ಸ್ವಂತಿಕೆಗೆ ಇಲ್ಲಿ ಬೆಲೆ ಬರುವುದೇ ಕೃತಕ ಕಲೆಯಿಂದ. ನೋವುಣ್ಣದೆ ಪ್ರೀತಿಸುವುದು ನಿಜಕ್ಕೂ ಕಷ್ಟಕರವಾಗಿಬಿಟ್ಟಿದೆ. ಅದು ಅಧ್ಯಯನ ಕ್ಷೇತ್ರದಲ್ಲಿರಲಿ, ಬೀದಿಗಳಲ್ಲಿರಲಿ, ರಾಜಕೀಯದಲ್ಲಿರಲಿ. ಸಾವಿನಲ್ಲೇ ಇರಲಿ ಅಥವಾ ಬದುಕಿನಲ್ಲೇ ಇರಲಿ; ಮನುಷ್ಯನ ಮೌಲ್ಯ ಎಂಬುದು ಅವನ ತತ್ಕ್ಷಣದ ಅಸ್ಮಿತೆ ಮತ್ತು ಸಮೀಪದ ಯಾವುದೋ ಒಂದು ಸಾಧ್ಯತೆಯ ಮಟ್ಟಕ್ಕಷ್ಟೇ ಇಳಿದುಬಿಟ್ಟಿದೆ. ಒಂದು ವೋಟಿಗೆ. ಒಂದು ಸಂಖ್ಯೆಗೆ ಒಂದು ವಸ್ತುವಿಗೆ. ಅಷ್ಟೆ. ಮನುಷ್ಯನನ್ನು ಅವನ ಮನಸ್ಸಿನ ಮೂಲಕ ಎಂದೂ ಪರಿಗಣಿಸಲಿಲ್ಲ. ನಭೋಮಂಡಲದ ನಕ್ಷತ್ರಗಳ ಧೂಳಿನಿಂದ ಮಾಡಲ್ಪಟ್ಟ ಅತ್ಯದ್ಭುತ ವಸ್ತುವಿನಂತೆ ಎಂದೂ ಅವನನ್ನು ಗುರುತಿಸಲಿಲ್ಲ.

ಈ ರೀತಿಯ ಪತ್ರವನ್ನು ಮೊದಲ ಬಾರಿಗೆ ಬರೆಯುತ್ತಿದ್ದೇನೆ. ಇದು ಅಂತಿಮ ಪತ್ರದ ಮೊದಲ ಯತ್ನ. ಏನಾದರೂ ತಪ್ಪಾಗಿ ಬರೆದಿದ್ದರೆ ಮನ್ನಿಸಿ. ಬಹುಶಃ ಪ್ರಪಂಚವನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾನು ಎಡವಿದೆ. ಪ್ರೀತಿ, ನೋವು, ಬದುಕು, ಸಾವು ಇವನ್ನೆಲ್ಲಾ ಅರ್ಥ ಮಾಡಿಕೊಳ್ಳುವಲ್ಲಿ ಸೋತೆ. ಆತುರವೇನಿರಲಿಲ್ಲ. ನಾನು ಓಡುತ್ತಲೇ ಇದ್ದೆ. ಬದುಕು ಪ್ರಾರಂಭಿಸುವ ಹತಾಶೆಯಿಂದ ಓಡುತ್ತಿದ್ದೆ. ಕೆಲವರಿಗೆ ಬದುಕೇ ಒಂದು ಶಾಪ. ನನಗೆ, ನನ್ನ ಹುಟ್ಟೇ ನನಗೆ ಮಾರಣಾಂತಿಕ ಅಪಘಾತ. ನನ್ನ ಬಾಲ್ಯದ ಏಕಾಂಗಿತನದಿಂದ ನಾನೆಂದೂ ಚೇತರಿಸಿಕೊಳ್ಳಲಾರೆ. ನನ್ನ ಗತದಿಂದ ಬಂದ ಪಾಪಿ ಕೂಸು ನಾನು.

ಈ ಕ್ಷಣದಲ್ಲಿ ನನಗೆ ನೋವಾಗುತ್ತಿಲ್ಲ. ದುಃಖವಾಗುತ್ತಿಲ್ಲ; ಖಾಲಿ ಖಾಲಿ ಅನಿಸುತ್ತಿದೆ. ನನ್ನ ಬಗ್ಗೆ ನನಗೇ ಕಾಳಜಿಯಿಲ್ಲದಾಗಿದೆ. ಇದು ಅಸಹ್ಯ; ಹಾಗಾಗಿ ಈ ಕೆಲಸ ಮಾಡುತ್ತಿದ್ದೇನೆ. ಜನರು ನನ್ನನ್ನು ಹೇಡಿಯೆಂದು ಜರಿಯಬಹುದು. ನಾನು ಹೋದ ಮೇಲೆ ಸ್ವಾರ್ಥಿ, ಮೂರ್ಖ ಎನ್ನಬಹುದು. ಅದರ ಬಗ್ಗೆಯೇನೂ ಚಿಂತೆಯಿಲ್ಲ. ಪುನರ್ ಜನ್ಮದ ಕತೆಗಳಲ್ಲಿ, ಭೂತ, ಪಿಶಾಚಿಗಳಿರುವುದರಲ್ಲಿ ನನಗೆ ನಂಬಿಕೆಯಿಲ್ಲ. ಏನಾದರೂ ನಂಬುವುದಿದ್ದರೆ ಅದು ನಾನು ತಾರೆಗಳವರೆಗೆ ಪ್ರಯಾಣಿಸಬಲ್ಲೆನೆಂಬುದನ್ನು ಮಾತ್ರ ಮತ್ತು ಇತರ ಪ್ರಪಂಚಗಳ ಬಗ್ಗೆ ತಿಳಿದುಕೊಳ್ಳಬಲ್ಲೆ ಎಂಬುದನ್ನು ಮಾತ್ರವೇ.

ಈ ಪತ್ರ ಓದುತ್ತಿರುವ ನೀವು ನನಗೇನಾದರೂ ಮಾಡಬಹುದಾದರೆ, ಕಳೆದ ಏಳು ತಿಂಗಳಿನ ಫೆಲೋಶಿಪ್ ಹಣ ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿ ಇನ್ನೂ ಬರಬೇಕಿದೆ. ಅದು ನನ್ನ ಕುಟುಂಬದವರಿಗೆ ತಲುಪುವಂತೆ ಮಾಡಿ. ರಾಮ್ಜಿಗೆ ನಲವತ್ತು ಸಾವಿರದಷ್ಟು ಕೊಡಬೇಕಿದೆ. ಅವನು ವಾಪಸ್ ಕೇಳಿಲ್ಲ. ದಯವಿಟ್ಟು ನನಗೆ ಬರುವ ಹಣದಲ್ಲಿ ಅವನ ಹಣವನ್ನು ಕೊಟ್ಟುಬಿಡಿ. ನನ್ನ ಅಂತ್ಯಕ್ರಿಯೆ ಶಾಂತವಾಗಿ, ಸುಗಮವಾಗಿ ನಡೆಯಲಿ. ಹಿಂಗೆ ಕಾಣಿಸಿಕೊಂಡು ಹಂಗೆ ಮರೆಯಾಗಿಬಿಟ್ಟ ಎನ್ನುವಂತೆ ವರ್ತಿಸಿ. ನನಗಾಗಿ ಕಣ್ಣೀರು ಬೇಡ. ಜೀವಂತವಾಗಿದ್ದಾಗ ಇರುವುದಕ್ಕಿಂತಲೂ ಸತ್ತಮೇಲೆಯೇ ನಾನು ಖುಷಿಯಾಗಿರುತ್ತೇನೆ ಎನ್ನುವುದು ಗೊತ್ತಿರಲಿ; ಮಬ್ಬುಗತ್ತಲೆಯಿಂದ ತಾರೆಗಳೆಡೆಗೆ.

ಉಮಾ ಅಣ್ಣ, ಈ ಕೆಲಸಕ್ಕೆ ನಿಮ್ಮ ಕೋಣೆಯನ್ನು ಉಪಯೋಗಿಸಿದ್ದಕ್ಕೆ ಕ್ಷಮೆ ಇರಲಿ. ‘ಆಸಾ’ ಕುಟುಂಬಕ್ಕೆ ನಿರಾಸೆ ಮೂಡಿಸಿದ್ದಕ್ಕೆ ಕ್ಷಮೆ ಕೋರುತ್ತೇನೆ. ನೀವೆಲ್ಲರೂ ನನ್ನನ್ನು ತುಂಬಾ ಪ್ರೀತಿಸಿದಿರಿ. ನಿಮ್ಮೆಲ್ಲರ ಉಜ್ವಲ ಭವಿಷ್ಯಕ್ಕೆ ಹಾರೈಸುತ್ತಿದ್ದೇನೆ. ಇದೋ ಕೊನೆಯ ಒಂದು ಸಲ, ಜೈ ಭೀಮ್.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್‌ನಿಂದ ಹೊರಬರುತ್ತಿರುವ ರೋಹಿತ್ ವೇಮುಲ

ಫಾರ್ಮಾಲಿಟಿಗಳನ್ನು ಬರೆಯುವುದನ್ನು ಮರೆತುಬಿಟ್ಟೆ. ನನ್ನ ಸಾವಿಗೆ ಯಾರೂ ಹೊಣೆಗಾರರಲ್ಲ. ಯಾರೂ ನನ್ನನ್ನು ತಮ್ಮ ಕೃತ್ಯಗಳಿಂದಾಗಲೀ, ಮಾತಿನಿಂದಾಗಲೀ ಇದಕ್ಕೆ ಉತ್ತೇಜಿಸಲಿಲ್ಲ. ಇದು ನನ್ನ ನಿರ್ಧಾರ ಮತ್ತು ಇದಕ್ಕೆ ನಾನೊಬ್ಬನೇ ಜವಾಬ್ದಾರ. ನಾನು ಹೋದ ಮೇಲೆ ಈ ವಿಷಯವಾಗಿ ನನ್ನ ಸ್ನೇಹಿತರಿಗೆ ಮತ್ತು ಶತ್ರುಗಳಿಗೆ ತೊಂದರೆ ಕೊಡಬೇಡಿ.

ಇದನ್ನೂ ಓದಿ; ಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...