Homeಮುಖಪುಟ'ನೆರಳಿನಿಂದ ನಕ್ಷತ್ರದವರೆಗೆ..'; ರೋಹಿತ್ ವೇಮುಲಾ 8ನೇ ವರ್ಷದ ಸ್ಮರಣೆ

‘ನೆರಳಿನಿಂದ ನಕ್ಷತ್ರದವರೆಗೆ..’; ರೋಹಿತ್ ವೇಮುಲಾ 8ನೇ ವರ್ಷದ ಸ್ಮರಣೆ

- Advertisement -
- Advertisement -

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೂ ಕಳೆದಿರಲಿಲ್ಲ; ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲ ಆತ್ಮಹತ್ಯೆಗೆ ಶರಣಾಗಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಭಿಮಾನಿಯಾಗಿದ್ದ, ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಬೇಕು ಎಂದುಕೊಂಡಿದ್ದ ರೋಹಿತ್ ಸಾವಿನ ಸುದ್ದಿ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ದೇಶದ ಲಕ್ಷಾಂತರ ಜನರ; ಮುಖ್ಯವಾಗಿ, ಯುವ ಸಮೂಹದ ಕಣ್ಣೀರಿಗೆ ಕಾರಣವಾಗಿತ್ತು.

ದಲಿತ ವಿದ್ಯಾರ್ಥಿಗಳಿಗೆ ನೆರವು ನೀಡುವಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿದ್ದ ತಾರತಮ್ಯ ಹಾಗೂ ವಿವಿಗಳ ಕೇಸರೀಕರಣದ ವಿರುದ್ಧ ಸದಾ ಧ್ವನಿ ಎತ್ತುತ್ತಿದ್ದ ರೋಹಿತ್ ವೇಮುಲ ಬರೆದಿದ್ದ ಕೊನೆಯ ಪತ್ರ ಪ್ರತಿಯೊಬ್ಬರ ಕರುಳನ್ನೂ ಕಿವುಚಿತ್ತು.

26 ವರ್ಷದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದ ರೋಹಿತ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ತಮ್ಮ ಸೀನಿಯರ್ ಒಬ್ಬರ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘದ ಸದಸ್ಯರಾಗಿದ್ದರು, ಇದು ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಡುತ್ತದೆ. ವಿಶ್ವವಿದ್ಯಾನಿಲಯದ ವಸತಿ ಸೌಲಭ್ಯದಿಂದ ಹೊರಹಾಕುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಐವರು ದಲಿತ ವಿದ್ಯಾರ್ಥಿಗಳಲ್ಲಿ ಇವರೂ ಒಬ್ಬರಾಗಿದ್ದು, ಹಾಸ್ಟೆಲ್‌ನಿಂದ ಹೊರಬರುತ್ತಿರುವ ಫೋಟೋಗಳು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದವು.

ಬಿಜೆಪಿಯ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯನ ಮೇಲೆ ಅವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನೂ ರೋಹಿತ್ ಎದುರಿಸಿದ್ದರು. ಆದರೆ, ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆ ನಂತರ ಕ್ಲೀನ್‌ಚಿಟ್ ನೀಡಿದರೂ, ಡಿಸೆಂಬರ್‌ ಹೊತ್ತಿಗೆ ತನ್ನ ನಿರ್ಧಾರವನ್ನು ಬದಲಾಯಿಸಿತು.

‘ರೋಹಿತ್ ಕಠಿಣ ಪರಿಶ್ರಮಿ, ಅದ್ಭುತ ವಿದ್ಯಾರ್ಥಿ ಮತ್ತು ಸಹೃದಯ ಆತ್ಮ’ ಎಂದು ಅವರ ಆತ್ಮೀಯ ಸ್ನೇಹಿತರಾಗಿದ್ದ ಪಿ ವಿಜಯ್ ಹೇಳಿದ್ದರು. ‘ಅವರು ತಮ್ಮ ಹೆಚ್ಚಿನ ಸಮಯವನ್ನು ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಕಳೆಯುತ್ತಿದ್ದರು’ ಎಂದು ಅವರ ಮರಣದ ನಂತರ ಹೇಳಿದ್ದರು.

ರೋಹಿತ್ ಸಾವಿನ ನಂತರ ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ, ಹಲವು ವಿಶ್ವವಿದ್ಯಾಲಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದವು. ಸಂಸತ್ತಿನ ಅಧಿವೇಶನದಲ್ಲಿ ಹಲವು ದಿನಗಳ ಕಾಲ ರೋಹಿತ್ ಸಾವಿನ ವಿಚಾರವಾಗಿ ಚರ್ಚೆಗಳು ನಡೆದು, ಅಂದಿನ ಮಾನವ ಸಂಪನ್ಮೂಲ ಸಚಿವರಾಗಿದ್ದ ಸ್ಮೃತಿ ಇರಾನಿ ಅವರನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಇಂದಿಗೆ (17-01-2016; 17-01-2024) ರೋಹಿತ್ ನಮ್ಮನ್ನೆಲ್ಲಾ ದೈಹಿಕವಾಗಿ ಅಗಲಿ, ಮನಸ್ಸಿನಿಂದ ಅಪ್ಪಿಕೊಂಡು ಎಂಟು ವರ್ಷ ಕಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದು ಲಕ್ಷಾಂತರ ಜನ ರೋಹಿತ್ ನೆನಪಿಸಿಕೊಂಡು ಪೋಸ್ಟ್ ಮಾಡುತ್ತಿದ್ದಾರೆ. ಆತ ಕೊನೆಯದಾಗಿ ಬರೆದ ಡೆತ್ ನೋಟ್‌ನ ಸಾಲುಗಳನ್ನು ಹಂಚಿಕೊಂಡಿದ್ದಾರೆ.

ರೋಹಿತ್ ವೇಮುಲ ಕೊನೆಯದಾಗಿ ಬರೆದ ಡೆತ್ ನೋಟ್:

ಶುಭ ಮುಂಜಾನೆ…

ನೀವು ಈ ಪತ್ರವನ್ನು ಓದುವಾಗ ನಾನಿರುವುದಿಲ್ಲ, ಕೋಪ ಮಾಡಿಕೊಳ್ಳಬೇಡಿ. ನನಗೆ ಗೊತ್ತು, ನಿಮ್ಮಲ್ಲಿ ಹಲವರು ನಿಜಕ್ಕೂ ನನ್ನ ಬಗ್ಗೆ ಕಾಳಜಿ ತೋರಿದಿರಿ, ಪ್ರೀತಿಸಿದಿರಿ ಮತ್ತು ಉತ್ತಮವಾಗಿ ನೋಡಿಕೊಂಡಿರಿ. ಯಾರ ಮೇಲೂ ನನಗೆ ದೂರುಗಳಿಲ್ಲ. ಯಾವಾಗಲೂ ನನಗೆ ಸಮಸ್ಯೆಯಿದ್ದಿದ್ದು ನನ್ನೊಂದಿಗೇನೇ, ನನ್ನ ದೇಹ ಮತ್ತು ಆತ್ಮದ ನಡುವಿನ ಕಂದಕ ದೊಡ್ಡದಾಗುತ್ತಿರುವ ಭಾವನೆ ಮತ್ತು ನಾನು ರಾಕ್ಷಸನಾಗಿಬಿಟ್ಟಿದ್ದೇನೆ.

ಒಬ್ಬ ಬರಹಗಾರನಾಗಬೇಕೆಂಬುದು ಯಾವಾಗಲೂ ನನ್ನ ಬಯಕೆಯಾಗಿತ್ತು. ಕಾರ್ಲ್ ಸಗಾನ್‌ನಂತೆ, ವಿಜ್ಞಾನದ ಬರಹಗಾರನಾಗಬಯಸಿದ್ದೆ. ಕೊನೆಗೆ. ಇದೊಂದು ಪತ್ರವನ್ನು ಮಾತ್ರ ನನ್ನಿಂದ ಬರೆಯಲಾಗುತ್ತಿರುವುದು.
ನಾನು ವಿಜ್ಞಾನ, ನಕ್ಷತ್ರ, ಪ್ರಕೃತಿಯನ್ನು ಪ್ರೀತಿಸಿದೆ. ಆದರೆ, ಪ್ರಕೃತಿಯಿಂದ ಮನುಷ್ಯರು ವಿಚ್ಛೇದನ ಪಡೆದು ಬಹಳ ಕಾಲವಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ. ನಮ್ಮ ಭಾವನೆಗಳೆಲ್ಲ ಸೆಕೆಂಡ್ ಹ್ಯಾಂಡು. ಪ್ರೀತಿಯನ್ನು ಇಲ್ಲಿ ಕಟ್ಟಿಕೊಡಲಾಗಿದ್ದು, ನಂಬಿಕೆಗಳಿಗೆ ಬಣ್ಣ ಬಳಿಯಲಾಗಿದೆ. ನಮ್ಮ ಸ್ವಂತಿಕೆಗೆ ಇಲ್ಲಿ ಬೆಲೆ ಬರುವುದೇ ಕೃತಕ ಕಲೆಯಿಂದ. ನೋವುಣ್ಣದೆ ಪ್ರೀತಿಸುವುದು ನಿಜಕ್ಕೂ ಕಷ್ಟಕರವಾಗಿಬಿಟ್ಟಿದೆ. ಅದು ಅಧ್ಯಯನ ಕ್ಷೇತ್ರದಲ್ಲಿರಲಿ, ಬೀದಿಗಳಲ್ಲಿರಲಿ, ರಾಜಕೀಯದಲ್ಲಿರಲಿ. ಸಾವಿನಲ್ಲೇ ಇರಲಿ ಅಥವಾ ಬದುಕಿನಲ್ಲೇ ಇರಲಿ; ಮನುಷ್ಯನ ಮೌಲ್ಯ ಎಂಬುದು ಅವನ ತತ್ಕ್ಷಣದ ಅಸ್ಮಿತೆ ಮತ್ತು ಸಮೀಪದ ಯಾವುದೋ ಒಂದು ಸಾಧ್ಯತೆಯ ಮಟ್ಟಕ್ಕಷ್ಟೇ ಇಳಿದುಬಿಟ್ಟಿದೆ. ಒಂದು ವೋಟಿಗೆ. ಒಂದು ಸಂಖ್ಯೆಗೆ ಒಂದು ವಸ್ತುವಿಗೆ. ಅಷ್ಟೆ. ಮನುಷ್ಯನನ್ನು ಅವನ ಮನಸ್ಸಿನ ಮೂಲಕ ಎಂದೂ ಪರಿಗಣಿಸಲಿಲ್ಲ. ನಭೋಮಂಡಲದ ನಕ್ಷತ್ರಗಳ ಧೂಳಿನಿಂದ ಮಾಡಲ್ಪಟ್ಟ ಅತ್ಯದ್ಭುತ ವಸ್ತುವಿನಂತೆ ಎಂದೂ ಅವನನ್ನು ಗುರುತಿಸಲಿಲ್ಲ.

ಈ ರೀತಿಯ ಪತ್ರವನ್ನು ಮೊದಲ ಬಾರಿಗೆ ಬರೆಯುತ್ತಿದ್ದೇನೆ. ಇದು ಅಂತಿಮ ಪತ್ರದ ಮೊದಲ ಯತ್ನ. ಏನಾದರೂ ತಪ್ಪಾಗಿ ಬರೆದಿದ್ದರೆ ಮನ್ನಿಸಿ. ಬಹುಶಃ ಪ್ರಪಂಚವನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾನು ಎಡವಿದೆ. ಪ್ರೀತಿ, ನೋವು, ಬದುಕು, ಸಾವು ಇವನ್ನೆಲ್ಲಾ ಅರ್ಥ ಮಾಡಿಕೊಳ್ಳುವಲ್ಲಿ ಸೋತೆ. ಆತುರವೇನಿರಲಿಲ್ಲ. ನಾನು ಓಡುತ್ತಲೇ ಇದ್ದೆ. ಬದುಕು ಪ್ರಾರಂಭಿಸುವ ಹತಾಶೆಯಿಂದ ಓಡುತ್ತಿದ್ದೆ. ಕೆಲವರಿಗೆ ಬದುಕೇ ಒಂದು ಶಾಪ. ನನಗೆ, ನನ್ನ ಹುಟ್ಟೇ ನನಗೆ ಮಾರಣಾಂತಿಕ ಅಪಘಾತ. ನನ್ನ ಬಾಲ್ಯದ ಏಕಾಂಗಿತನದಿಂದ ನಾನೆಂದೂ ಚೇತರಿಸಿಕೊಳ್ಳಲಾರೆ. ನನ್ನ ಗತದಿಂದ ಬಂದ ಪಾಪಿ ಕೂಸು ನಾನು.

ಈ ಕ್ಷಣದಲ್ಲಿ ನನಗೆ ನೋವಾಗುತ್ತಿಲ್ಲ. ದುಃಖವಾಗುತ್ತಿಲ್ಲ; ಖಾಲಿ ಖಾಲಿ ಅನಿಸುತ್ತಿದೆ. ನನ್ನ ಬಗ್ಗೆ ನನಗೇ ಕಾಳಜಿಯಿಲ್ಲದಾಗಿದೆ. ಇದು ಅಸಹ್ಯ; ಹಾಗಾಗಿ ಈ ಕೆಲಸ ಮಾಡುತ್ತಿದ್ದೇನೆ. ಜನರು ನನ್ನನ್ನು ಹೇಡಿಯೆಂದು ಜರಿಯಬಹುದು. ನಾನು ಹೋದ ಮೇಲೆ ಸ್ವಾರ್ಥಿ, ಮೂರ್ಖ ಎನ್ನಬಹುದು. ಅದರ ಬಗ್ಗೆಯೇನೂ ಚಿಂತೆಯಿಲ್ಲ. ಪುನರ್ ಜನ್ಮದ ಕತೆಗಳಲ್ಲಿ, ಭೂತ, ಪಿಶಾಚಿಗಳಿರುವುದರಲ್ಲಿ ನನಗೆ ನಂಬಿಕೆಯಿಲ್ಲ. ಏನಾದರೂ ನಂಬುವುದಿದ್ದರೆ ಅದು ನಾನು ತಾರೆಗಳವರೆಗೆ ಪ್ರಯಾಣಿಸಬಲ್ಲೆನೆಂಬುದನ್ನು ಮಾತ್ರ ಮತ್ತು ಇತರ ಪ್ರಪಂಚಗಳ ಬಗ್ಗೆ ತಿಳಿದುಕೊಳ್ಳಬಲ್ಲೆ ಎಂಬುದನ್ನು ಮಾತ್ರವೇ.

ಈ ಪತ್ರ ಓದುತ್ತಿರುವ ನೀವು ನನಗೇನಾದರೂ ಮಾಡಬಹುದಾದರೆ, ಕಳೆದ ಏಳು ತಿಂಗಳಿನ ಫೆಲೋಶಿಪ್ ಹಣ ಒಂದು ಲಕ್ಷದ ಎಪ್ಪತ್ತೈದು ಸಾವಿರ ರೂಪಾಯಿ ಇನ್ನೂ ಬರಬೇಕಿದೆ. ಅದು ನನ್ನ ಕುಟುಂಬದವರಿಗೆ ತಲುಪುವಂತೆ ಮಾಡಿ. ರಾಮ್ಜಿಗೆ ನಲವತ್ತು ಸಾವಿರದಷ್ಟು ಕೊಡಬೇಕಿದೆ. ಅವನು ವಾಪಸ್ ಕೇಳಿಲ್ಲ. ದಯವಿಟ್ಟು ನನಗೆ ಬರುವ ಹಣದಲ್ಲಿ ಅವನ ಹಣವನ್ನು ಕೊಟ್ಟುಬಿಡಿ. ನನ್ನ ಅಂತ್ಯಕ್ರಿಯೆ ಶಾಂತವಾಗಿ, ಸುಗಮವಾಗಿ ನಡೆಯಲಿ. ಹಿಂಗೆ ಕಾಣಿಸಿಕೊಂಡು ಹಂಗೆ ಮರೆಯಾಗಿಬಿಟ್ಟ ಎನ್ನುವಂತೆ ವರ್ತಿಸಿ. ನನಗಾಗಿ ಕಣ್ಣೀರು ಬೇಡ. ಜೀವಂತವಾಗಿದ್ದಾಗ ಇರುವುದಕ್ಕಿಂತಲೂ ಸತ್ತಮೇಲೆಯೇ ನಾನು ಖುಷಿಯಾಗಿರುತ್ತೇನೆ ಎನ್ನುವುದು ಗೊತ್ತಿರಲಿ; ಮಬ್ಬುಗತ್ತಲೆಯಿಂದ ತಾರೆಗಳೆಡೆಗೆ.

ಉಮಾ ಅಣ್ಣ, ಈ ಕೆಲಸಕ್ಕೆ ನಿಮ್ಮ ಕೋಣೆಯನ್ನು ಉಪಯೋಗಿಸಿದ್ದಕ್ಕೆ ಕ್ಷಮೆ ಇರಲಿ. ‘ಆಸಾ’ ಕುಟುಂಬಕ್ಕೆ ನಿರಾಸೆ ಮೂಡಿಸಿದ್ದಕ್ಕೆ ಕ್ಷಮೆ ಕೋರುತ್ತೇನೆ. ನೀವೆಲ್ಲರೂ ನನ್ನನ್ನು ತುಂಬಾ ಪ್ರೀತಿಸಿದಿರಿ. ನಿಮ್ಮೆಲ್ಲರ ಉಜ್ವಲ ಭವಿಷ್ಯಕ್ಕೆ ಹಾರೈಸುತ್ತಿದ್ದೇನೆ. ಇದೋ ಕೊನೆಯ ಒಂದು ಸಲ, ಜೈ ಭೀಮ್.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್‌ನಿಂದ ಹೊರಬರುತ್ತಿರುವ ರೋಹಿತ್ ವೇಮುಲ

ಫಾರ್ಮಾಲಿಟಿಗಳನ್ನು ಬರೆಯುವುದನ್ನು ಮರೆತುಬಿಟ್ಟೆ. ನನ್ನ ಸಾವಿಗೆ ಯಾರೂ ಹೊಣೆಗಾರರಲ್ಲ. ಯಾರೂ ನನ್ನನ್ನು ತಮ್ಮ ಕೃತ್ಯಗಳಿಂದಾಗಲೀ, ಮಾತಿನಿಂದಾಗಲೀ ಇದಕ್ಕೆ ಉತ್ತೇಜಿಸಲಿಲ್ಲ. ಇದು ನನ್ನ ನಿರ್ಧಾರ ಮತ್ತು ಇದಕ್ಕೆ ನಾನೊಬ್ಬನೇ ಜವಾಬ್ದಾರ. ನಾನು ಹೋದ ಮೇಲೆ ಈ ವಿಷಯವಾಗಿ ನನ್ನ ಸ್ನೇಹಿತರಿಗೆ ಮತ್ತು ಶತ್ರುಗಳಿಗೆ ತೊಂದರೆ ಕೊಡಬೇಡಿ.

ಇದನ್ನೂ ಓದಿ; ಚಂಡೀಗಢ: ಮೇಯರ್ ಚುನಾವಣೆಗೂ ಮುನ್ನವೇ ಕಾರ್ಯಕರ್ತರ ನಡುವೆ ಮಾರಾಮಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...