Homeಅಂತರಾಷ್ಟ್ರೀಯಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಪರಾಧಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್‌ಎಸ್‌ಎ) ಮುಖ್ಯಸ್ಥ ಅಜಿತ್ ದೋವಲ್‌‌ ಅವರು ಇರಾನ್‌ ಸರ್ಕಾರಕ್ಕೆ ಹೇಳಿದ್ದಾರೆ ಎಂದು TOI ವರದಿ ಮಾಡಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು ಎಂದು ಅವರ ಹೇಳಿದ್ದಾರೆ.

ಪ್ರವಾದಿ ಮುಹಮ್ಮದ್‌ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ಮತ್ತು ದೆಹಲಿ ಮಾಧ್ಯಮ ಮುಖ್ಯಸ್ಥ ನೀಡಿದ ಅವಹೇಳನಕಾರಿ ಹೇಳಿಕೆಗಳ ವಿರುದ್ಧ, ಗಲ್ಪ್‌ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಪಕ್ಷವು ಒಬ್ಬರನ್ನು ಅಮಾನತುಗೊಳಿಸಿದ್ದು, ಇನ್ನೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಅಜಿತ್ ದೋವಲ್ ಜೊತೆಗೆ ನಡೆದ ಸಭೆಯ ಸಂದರ್ಭದಲ್ಲಿ ವಿವಾದದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇರಾನ್ ಸರ್ಕಾರದ ಹೇಳಿಕೆಯ ಪ್ರಕಾರ, “ಎನ್‌ಎಸ್‌ಎ ಅಜಿತ್ ದೋವಲ್ ಸಭೆಯಲ್ಲಿ, ಪ್ರವಾದಿಯ ಬಗ್ಗೆ ಭಾರತ ಸರ್ಕಾರದ ಗೌರವವನ್ನು ಪುನರುಚ್ಚರಿಸಿದರು. ತಪ್ಪು ಮಾಡಿದವರನ್ನು ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌‌ಬುಕ್‌ನಲ್ಲಿ ‘ನೂಪುರ್ ಶರ್ಮಾ’ ಬೆಂಬಲಿಸಿದ ಬಿಜೆಪಿ ಯುವಮೋರ್ಚಾ ನಾಯಕನ ವಿರುದ್ಧ ಎಫ್‌ಐಆರ್‌‌

ವಿವಾದದ ಬಗ್ಗೆ ಭಾರತ ಮತ್ತು ಇರಾನ್ ನಡುವಿನ ದೀರ್ಘಕಾಲದ ನಾಗರಿಕತೆ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೃದಯದಿಂದ ನೆನಪಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಬ್ದುಲ್ಲಾಹಿಯನ್ ಕರೆ ಮಾಡಿದ್ದಾರೆ ಎಂದು ಇರಾನ್ ಹೇಳಿದೆ.

“ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರ ಉಪಕ್ರಮಗಳ ಕುರಿತು ಚರ್ಚಿಸಿದರು. ಕೋವಿಡ್ ನಂತರದ ಯುಗದಲ್ಲಿ ವಿನಿಮಯವನ್ನು ವೇಗಗೊಳಿಸಲು ಎರಡೂ ದೇಶಗಳು ಕೆಲಸ ಮಾಡಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು” ಎಂದು ಇರಾನ್‌ ಹೇಳಿಕೆಯಲ್ಲಿ ಹೇಳಿದೆ.

“ಪ್ರಧಾನ ಮಂತ್ರಿ ಮೋದಿಯವರು ಇರಾನ್ ವಿದೇಶಾಂಗ ಸಚಿವರಿಗೆ ತಮ್ಮ ಶುಭಾಶಯಗಳನ್ನು ಗೌರವಾನ್ವಿತ ಅಧ್ಯಕ್ಷ ಇಬ್ರಾಹಿಂ ರೈಸಿಗೆ ರವಾನಿಸಲು ವಿನಂತಿಸಿದರು. ಶೀಘ್ರದಲ್ಲಿಯೇ ಇರಾನ್ ಅಧ್ಯಕ್ಷರನ್ನು ಭೇಟಿಯಾಗಲು ಎದುರುನೋಡುತ್ತಿದ್ದೇವೆ” ಎಂದು ಇರಾನ್ ಸಚಿವರೊಂದಿಗಿನ ಮೋದಿ ಭೇಟಿಯ ಕುರಿತು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಭಾರತ ಮತ್ತು ಇರಾನ್ ನಡುವಿನ ಶತಮಾನಗಳ ಹಳೆಯ ನಾಗರಿಕತೆಯ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಯ ಕುರಿತು ಉಪಯುಕ್ತ ಚರ್ಚೆಗಾಗಿ ವಿದೇಶಾಂಗ ಸಚಿವ ಹೊಸೈನ್ ಅಮಿರ್‌ ಅಬ್ದೊಲ್ಲಾಹಿಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನಮ್ಮ ಸಂಬಂಧಗಳು ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡಿವೆ. ಜೊತೆಗೆ ಪ್ರಾದೇಶಿಕ ಭದ್ರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂತ ಕಲಬೆರಕೆ ಮಾಧ್ಯಮಗಳು,ದೇಶದ್ರೋಹಿ ಕಮ್ಯೂನಿಸ್ಟ್ ರು ,ಕೆಲ ಗುಲಾಮರು ಇರೋವರೆಗೂ ಈ ದೇಶದ ಘನತೆಗೆ ತೊಂದರೆ ಖಚಿತ ,ಹೆಚ್ಚು ಕಾಲ ನಿಮ್ಮ ಆಟ ನಡೆಯಲ್ಲಾ ಈ ದೇಶದಲ್ಲಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...