ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಪರಾಧಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್ಎಸ್ಎ) ಮುಖ್ಯಸ್ಥ ಅಜಿತ್ ದೋವಲ್ ಅವರು ಇರಾನ್ ಸರ್ಕಾರಕ್ಕೆ ಹೇಳಿದ್ದಾರೆ ಎಂದು TOI ವರದಿ ಮಾಡಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು ಎಂದು ಅವರ ಹೇಳಿದ್ದಾರೆ.
ಪ್ರವಾದಿ ಮುಹಮ್ಮದ್ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ಮತ್ತು ದೆಹಲಿ ಮಾಧ್ಯಮ ಮುಖ್ಯಸ್ಥ ನೀಡಿದ ಅವಹೇಳನಕಾರಿ ಹೇಳಿಕೆಗಳ ವಿರುದ್ಧ, ಗಲ್ಪ್ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಪಕ್ಷವು ಒಬ್ಬರನ್ನು ಅಮಾನತುಗೊಳಿಸಿದ್ದು, ಇನ್ನೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಅಜಿತ್ ದೋವಲ್ ಜೊತೆಗೆ ನಡೆದ ಸಭೆಯ ಸಂದರ್ಭದಲ್ಲಿ ವಿವಾದದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇರಾನ್ ಸರ್ಕಾರದ ಹೇಳಿಕೆಯ ಪ್ರಕಾರ, “ಎನ್ಎಸ್ಎ ಅಜಿತ್ ದೋವಲ್ ಸಭೆಯಲ್ಲಿ, ಪ್ರವಾದಿಯ ಬಗ್ಗೆ ಭಾರತ ಸರ್ಕಾರದ ಗೌರವವನ್ನು ಪುನರುಚ್ಚರಿಸಿದರು. ತಪ್ಪು ಮಾಡಿದವರನ್ನು ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಫೇಸ್ಬುಕ್ನಲ್ಲಿ ‘ನೂಪುರ್ ಶರ್ಮಾ’ ಬೆಂಬಲಿಸಿದ ಬಿಜೆಪಿ ಯುವಮೋರ್ಚಾ ನಾಯಕನ ವಿರುದ್ಧ ಎಫ್ಐಆರ್
ವಿವಾದದ ಬಗ್ಗೆ ಭಾರತ ಮತ್ತು ಇರಾನ್ ನಡುವಿನ ದೀರ್ಘಕಾಲದ ನಾಗರಿಕತೆ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೃದಯದಿಂದ ನೆನಪಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಬ್ದುಲ್ಲಾಹಿಯನ್ ಕರೆ ಮಾಡಿದ್ದಾರೆ ಎಂದು ಇರಾನ್ ಹೇಳಿದೆ.
“ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರ ಉಪಕ್ರಮಗಳ ಕುರಿತು ಚರ್ಚಿಸಿದರು. ಕೋವಿಡ್ ನಂತರದ ಯುಗದಲ್ಲಿ ವಿನಿಮಯವನ್ನು ವೇಗಗೊಳಿಸಲು ಎರಡೂ ದೇಶಗಳು ಕೆಲಸ ಮಾಡಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು” ಎಂದು ಇರಾನ್ ಹೇಳಿಕೆಯಲ್ಲಿ ಹೇಳಿದೆ.
“ಪ್ರಧಾನ ಮಂತ್ರಿ ಮೋದಿಯವರು ಇರಾನ್ ವಿದೇಶಾಂಗ ಸಚಿವರಿಗೆ ತಮ್ಮ ಶುಭಾಶಯಗಳನ್ನು ಗೌರವಾನ್ವಿತ ಅಧ್ಯಕ್ಷ ಇಬ್ರಾಹಿಂ ರೈಸಿಗೆ ರವಾನಿಸಲು ವಿನಂತಿಸಿದರು. ಶೀಘ್ರದಲ್ಲಿಯೇ ಇರಾನ್ ಅಧ್ಯಕ್ಷರನ್ನು ಭೇಟಿಯಾಗಲು ಎದುರುನೋಡುತ್ತಿದ್ದೇವೆ” ಎಂದು ಇರಾನ್ ಸಚಿವರೊಂದಿಗಿನ ಮೋದಿ ಭೇಟಿಯ ಕುರಿತು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ
“ಭಾರತ ಮತ್ತು ಇರಾನ್ ನಡುವಿನ ಶತಮಾನಗಳ ಹಳೆಯ ನಾಗರಿಕತೆಯ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಯ ಕುರಿತು ಉಪಯುಕ್ತ ಚರ್ಚೆಗಾಗಿ ವಿದೇಶಾಂಗ ಸಚಿವ ಹೊಸೈನ್ ಅಮಿರ್ ಅಬ್ದೊಲ್ಲಾಹಿಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನಮ್ಮ ಸಂಬಂಧಗಳು ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡಿವೆ. ಜೊತೆಗೆ ಪ್ರಾದೇಶಿಕ ಭದ್ರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Was happy to receive Foreign Minister Hossein Amirabdollahian for a useful discussion on further development of Centuries-old civilizational links between India and Iran. Our relations have mutually benefited both the countries and have promoted regional security and prosperity. pic.twitter.com/Ef5Sbtj7Gb
— Narendra Modi (@narendramodi) June 8, 2022
ನಿಮ್ಮಂತ ಕಲಬೆರಕೆ ಮಾಧ್ಯಮಗಳು,ದೇಶದ್ರೋಹಿ ಕಮ್ಯೂನಿಸ್ಟ್ ರು ,ಕೆಲ ಗುಲಾಮರು ಇರೋವರೆಗೂ ಈ ದೇಶದ ಘನತೆಗೆ ತೊಂದರೆ ಖಚಿತ ,ಹೆಚ್ಚು ಕಾಲ ನಿಮ್ಮ ಆಟ ನಡೆಯಲ್ಲಾ ಈ ದೇಶದಲ್ಲಿ