Homeಅಂತರಾಷ್ಟ್ರೀಯಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

ಪ್ರವಾದಿ ನಿಂದಕರಿಗೆ ತಕ್ಕ ಪಾಠ ಕಲಿಸಲಾಗುವುದು: ಇರಾನ್‌ಗೆ ಎನ್‌ಎಸ್‌ಎ ಅಜಿತ್‌ ದೋವಲ್‌‌ ಭರವಸೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಅಪರಾಧಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್‌ಎಸ್‌ಎ) ಮುಖ್ಯಸ್ಥ ಅಜಿತ್ ದೋವಲ್‌‌ ಅವರು ಇರಾನ್‌ ಸರ್ಕಾರಕ್ಕೆ ಹೇಳಿದ್ದಾರೆ ಎಂದು TOI ವರದಿ ಮಾಡಿದೆ. ಇಂತಹ ವ್ಯಕ್ತಿಗಳ ಜೊತೆಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು ಎಂದು ಅವರ ಹೇಳಿದ್ದಾರೆ.

ಪ್ರವಾದಿ ಮುಹಮ್ಮದ್‌ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರೆ ಮತ್ತು ದೆಹಲಿ ಮಾಧ್ಯಮ ಮುಖ್ಯಸ್ಥ ನೀಡಿದ ಅವಹೇಳನಕಾರಿ ಹೇಳಿಕೆಗಳ ವಿರುದ್ಧ, ಗಲ್ಪ್‌ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಪಕ್ಷವು ಒಬ್ಬರನ್ನು ಅಮಾನತುಗೊಳಿಸಿದ್ದು, ಇನ್ನೊಬ್ಬರನ್ನು ಪಕ್ಷದಿಂದ ಉಚ್ಛಾಟಿಸಿದೆ. ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್ ಅವರು ಅಜಿತ್ ದೋವಲ್ ಜೊತೆಗೆ ನಡೆದ ಸಭೆಯ ಸಂದರ್ಭದಲ್ಲಿ ವಿವಾದದ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇರಾನ್ ಸರ್ಕಾರದ ಹೇಳಿಕೆಯ ಪ್ರಕಾರ, “ಎನ್‌ಎಸ್‌ಎ ಅಜಿತ್ ದೋವಲ್ ಸಭೆಯಲ್ಲಿ, ಪ್ರವಾದಿಯ ಬಗ್ಗೆ ಭಾರತ ಸರ್ಕಾರದ ಗೌರವವನ್ನು ಪುನರುಚ್ಚರಿಸಿದರು. ತಪ್ಪು ಮಾಡಿದವರನ್ನು ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳ ಮಟ್ಟದಲ್ಲಿ ಇತರರಿಗೆ ಪಾಠವಾಗುವ ರೀತಿಯಲ್ಲಿ ವ್ಯವಹರಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌‌ಬುಕ್‌ನಲ್ಲಿ ‘ನೂಪುರ್ ಶರ್ಮಾ’ ಬೆಂಬಲಿಸಿದ ಬಿಜೆಪಿ ಯುವಮೋರ್ಚಾ ನಾಯಕನ ವಿರುದ್ಧ ಎಫ್‌ಐಆರ್‌‌

ವಿವಾದದ ಬಗ್ಗೆ ಭಾರತ ಮತ್ತು ಇರಾನ್ ನಡುವಿನ ದೀರ್ಘಕಾಲದ ನಾಗರಿಕತೆ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಹೃದಯದಿಂದ ನೆನಪಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಬ್ದುಲ್ಲಾಹಿಯನ್ ಕರೆ ಮಾಡಿದ್ದಾರೆ ಎಂದು ಇರಾನ್ ಹೇಳಿದೆ.

“ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರ ಉಪಕ್ರಮಗಳ ಕುರಿತು ಚರ್ಚಿಸಿದರು. ಕೋವಿಡ್ ನಂತರದ ಯುಗದಲ್ಲಿ ವಿನಿಮಯವನ್ನು ವೇಗಗೊಳಿಸಲು ಎರಡೂ ದೇಶಗಳು ಕೆಲಸ ಮಾಡಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು” ಎಂದು ಇರಾನ್‌ ಹೇಳಿಕೆಯಲ್ಲಿ ಹೇಳಿದೆ.

“ಪ್ರಧಾನ ಮಂತ್ರಿ ಮೋದಿಯವರು ಇರಾನ್ ವಿದೇಶಾಂಗ ಸಚಿವರಿಗೆ ತಮ್ಮ ಶುಭಾಶಯಗಳನ್ನು ಗೌರವಾನ್ವಿತ ಅಧ್ಯಕ್ಷ ಇಬ್ರಾಹಿಂ ರೈಸಿಗೆ ರವಾನಿಸಲು ವಿನಂತಿಸಿದರು. ಶೀಘ್ರದಲ್ಲಿಯೇ ಇರಾನ್ ಅಧ್ಯಕ್ಷರನ್ನು ಭೇಟಿಯಾಗಲು ಎದುರುನೋಡುತ್ತಿದ್ದೇವೆ” ಎಂದು ಇರಾನ್ ಸಚಿವರೊಂದಿಗಿನ ಮೋದಿ ಭೇಟಿಯ ಕುರಿತು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷ: ನೂಪುರ್ ಶರ್ಮಾ, ಪತ್ರಕರ್ತೆ ಸಬಾ ನಖ್ವಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ

“ಭಾರತ ಮತ್ತು ಇರಾನ್ ನಡುವಿನ ಶತಮಾನಗಳ ಹಳೆಯ ನಾಗರಿಕತೆಯ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಯ ಕುರಿತು ಉಪಯುಕ್ತ ಚರ್ಚೆಗಾಗಿ ವಿದೇಶಾಂಗ ಸಚಿವ ಹೊಸೈನ್ ಅಮಿರ್‌ ಅಬ್ದೊಲ್ಲಾಹಿಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ನಮ್ಮ ಸಂಬಂಧಗಳು ಎರಡೂ ದೇಶಗಳಿಗೆ ಪರಸ್ಪರ ಪ್ರಯೋಜನವನ್ನು ನೀಡಿವೆ. ಜೊತೆಗೆ ಪ್ರಾದೇಶಿಕ ಭದ್ರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂತ ಕಲಬೆರಕೆ ಮಾಧ್ಯಮಗಳು,ದೇಶದ್ರೋಹಿ ಕಮ್ಯೂನಿಸ್ಟ್ ರು ,ಕೆಲ ಗುಲಾಮರು ಇರೋವರೆಗೂ ಈ ದೇಶದ ಘನತೆಗೆ ತೊಂದರೆ ಖಚಿತ ,ಹೆಚ್ಚು ಕಾಲ ನಿಮ್ಮ ಆಟ ನಡೆಯಲ್ಲಾ ಈ ದೇಶದಲ್ಲಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...