Homeಕರ್ನಾಟಕJNU ಹಿಂಸಾಚಾರ ಖಂಡಿಸಿ, ಭಾರತ ಬಂದ್‌ ಬೆಂಬಲಿಸಿ ಸಹಸ್ರಾರು ಸಂಖ್ಯೆಯಲ್ಲಿ ಬೀದಿಗಿಳಿದ ದೆಹಲಿ ವಿ.ವಿ ವಿದ್ಯಾರ್ಥಿಗಳು..

JNU ಹಿಂಸಾಚಾರ ಖಂಡಿಸಿ, ಭಾರತ ಬಂದ್‌ ಬೆಂಬಲಿಸಿ ಸಹಸ್ರಾರು ಸಂಖ್ಯೆಯಲ್ಲಿ ಬೀದಿಗಿಳಿದ ದೆಹಲಿ ವಿ.ವಿ ವಿದ್ಯಾರ್ಥಿಗಳು..

- Advertisement -
- Advertisement -

JNUನಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ಖಂಡಿಸಿ, ಭಾರತ ಬಂದ್‌ ಬೆಂಬಲಿಸಿ ಸಹಸ್ರಾರು ಸಂಖ್ಯೆಯಲ್ಲಿ ದೆಹಲಿ ವಿ.ವಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಭಾರತದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆಯ ಜೊತೆಗೆ ಅವರ ಅಭಿಪ್ರಾಯಗಳಿಗೆ ಮುಕ್ತ ಸ್ವಾತಂತ್ರ್ಯವಿರಬೇಕೆಂದು ವಿದ್ಯಾರ್ಥಿಗಳ ಒತ್ತಾಯಿಸಿದ್ದಾರೆ.

“ಕಿರುಕುಳಕ್ಕೊಳಗಾದವರಿಗೆ ಮತ್ತು ಎಲ್ಲಾ ಧರ್ಮಗಳ ನಿರಾಶ್ರಿತರಿಗೆ ಮತ್ತು ಭೂಮಿಯ ಎಲ್ಲಾ ರಾಷ್ಟ್ರಗಳಿಗೆ ಆಶ್ರಯ ನೀಡಿದ ರಾಷ್ಟ್ರಕ್ಕೆ ಸೇರಿದವನೆಂದು ನನಗೆ ಹೆಮ್ಮೆ ಇದೆ.’ ಎಂಬ ಸ್ವಾಮಿ ವಿವೇಕಾನಂದರ ಹೇಳಿಕೆಯನ್ನು ಓದುವ ಮೂಲಕ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವೇಕಾನಂದರಿಗೆ ಗೌರವ ಸಲ್ಲಿಸಿದರು.

ತದನಂತರ ಕ್ಯಾಂಪಸ್‌ಗಳಲ್ಲಿನ ಹಿಂಸಾಚಾರದ ವಿರುದ್ಧ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನ ಹೆಜ್ಜೆಹಾಕಿದರು.

ಇನ್ನು ಬೆಂಗಳೂರಿನಲ್ಲಿ 24 ಗಂಟೆಗಳ ನಿರಂತರ ಪ್ರತಿಭಟನೆಗೆ ಕರೆಕೊಟ್ಟಿರುವ ವಿದ್ಯಾರ್ಥಿಗಳು ಸಹ ಭಾರತ್‌ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆಗೆ ಹಿರಿಯ ಇತಿಹಾಸಕಾರ ರಾಮಚಂದ್ರ ಗುಹಾ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ JNUSU ಮಾಜಿ ಅಧ್ಯಕ್ಷ ಸಾಯಿ ಬಾಲಾಜಿ, ಅವರು JNU ಅನ್ನು ಮುಚ್ಚಬಹುದು ಮತ್ತು ಪ್ರತಿಭಟನೆಗಳನ್ನು ಹತ್ತಿಕ್ಕಬಹುದು ಎಂದು ಭಾವಿಸಿದ್ದರು. ಆದರೆ ಈಗ ಭಾರತದ ಪ್ರತಿ ರಸ್ತೆ ಮತ್ತು ನಗರಗಳಲ್ಲಿ ಸಣ್ಣ JNUಗಳು ತಲೆ ಎತ್ತುತಲಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

ಹೈದರಾಬಾದ್‌ನ ಕೇಂದ್ರೀಯ ವಿ.ವಿ ವಿದ್ಯಾರ್ಥಿಗಳು ಸಹ ಜೆಎನ್‌ಯು ಮೇಲಿನ ದಾಳಿ, ಸಿಎಎ, ಎನ್‌ಆರ್‌ಸಿ ಖಂಡಿಸಿ ಮೆರವಣಿಗೆ ನಡೆಸಿದರು.

ಕೋಲ್ಕತ್ತ, ಮುಂಬೈ ಸೇರಿದಂತೆ ನೂರಾರು ಕಡೆ ವಿದ್ಯಾರ್ಥಿಗಳು ಇಂದೂ ಕೂಡ ಜೆಎನ್‌ಯು ದಾಳಿ ಖಂಡಿಸಿ ಮತ್ತು ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...