Homeಕರ್ನಾಟಕದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

- Advertisement -
- Advertisement -

ದೊಡ್ಡಮಟ್ಟದ ಗಟ್ಟಿಮುಟ್ಟಾದ ಸೈನ್ಯವೊಂದು ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ನಾನು ಇಲ್ಲಿ ಕಾಣುತ್ತಿದ್ದೇನೆ ಎಂದು ಆರ್ಥಿಕ ಚಿಂತಕರಾದ ಪರಕಾಲ ಪ್ರಭಾಕರ್ ಪ್ರಶಂಸೆ ವ್ಯಕ್ತಪಡಿಸಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಂವಿಧಾನದ ರಕ್ಷಣೆಗೆಂದೇ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದನ್ನು ನಾನು ಈವರೆಗೆ ನೋಡಿಲ್ಲ. ಆದರೆ, ನೀವು ಇಲ್ಲಿ ಸೇರಿದ್ದೀರಿ, ಅದಕ್ಕಾಗಿ ಇಲ್ಲಿ ಸೇರಿರುವ ಎಲ್ಲರಿಗೂ ನೂರು ನಮಸ್ಕಾರಗಳು” ಎಂದು ಪ್ರಭಾಕರ್ ಸಂತಸ ವ್ಯಕ್ತಪಡಿಸಿದರು.

“ಹಲವಾರು ವರ್ಷಗಳಿಂದ ಸಂವಿಧಾನದ ವಿರುದ್ಧ ಕೆಲಸ ಮಾಡುತ್ತಿರುವ ಜನರಿದ್ದಾರೆ, ಸಂವಿಧಾದ ಆಶಯಗಳ ವಿರುದ್ಧ ಕೆಲಸ ಮಾಡಲು ದೇಶದಲ್ಲಿ ಒಂದು ಸೈನ್ಯವೇ ಇದೆ. ಇಷ್ಟು ದಿನ ಸಂವಿಧಾನದ ಮೇಲಿನ ದಾಳಿಯ ವಿರುದ್ಧ ರಕ್ಷಿಸಿಕೊಳ್ಳಲು ಸೈನ್ಯ ಇರಲಿಲ್ಲ ಎಂಬ ಕೊರಗು ಕಾಡುತ್ತಿತ್ತು. ಆದರೆ,  ಇಂದು ನಿಮ್ಮೆಲ್ಲರನ್ನೂ ನೋಡಿದ ಮೇಲೆ ಆ ಚಿಂತೆ ಹೊರಟು ಹೋಯಿತು. ಕಾರಣವೇನೆಂದರೆ, ಇಂದು ನಾನು ದೊಡ್ಡದೊಂದು ಗಟ್ಟಿಮುಟ್ಟಾದ ಸೇನೆಯೊಂದು ಸಂವಿಧಾನದ ರಕ್ಷಣೆಗೆ ನಿಂತಿರುವುದನ್ನು ಕಾಣುತ್ತಿದ್ದೇನೆ” ಎಂದರು.

“ಇಲ್ಲಿ ರಾಜಕೀಯ ವ್ಯಕ್ತಿಗಳೂ ಇದ್ದಾರೆ. ಆದರೆ, ಅವರನ್ನು ನಂಬಬೇಡಿ ಎಂದು ಹೇಳುತ್ತಿದ್ದೇನೆ. ಸಾಮಾನ್ಯ ಜನರು, ನಮ್ಮಂತಹವರು ನಿಮ್ಮಂತಹವು, ನಾವು ಎಂಎಲ್‌ಎ ಮುಖ್ಯಮಂತ್ರಿ ಆಗಬೇಕೆಂದಿಲ್ಲ. ನಮಗೆ ಕೇವಲ ಸಂವಿಧಾನ ಬೇಕಿದೆ. ಏಕೆಂದರೆ, ಸಂವಿಧಾನ ಇಲ್ಲದಿದ್ದರೆ ಒಂದು ಜಾತಿಯಲ್ಲಿ ಹುಟ್ಟಿದ್ದಕ್ಕೆ ನಾನು ಮೇಲಿನವನಾಗಿ, ಬೇರೊಂದು ಜಾತಿಯಲ್ಲಿ ಹುಟ್ಟಿದ್ದಕ್ಕೆ ಇನ್ನೊಬ್ಬರನ್ನು ಕೆಳಗಿನವರಾಗಿ ಮಾಡಲಾಗುತ್ತದೆ” ಎಂದು ಹೇಳಿದರು.

“ಕೇವಲ ಸಂವಿಧಾನ ಮಾತ್ರ ನಮ್ಮನ್ನು ಸಮಾನರನ್ನಾಗಿಸುತ್ತದೆ. ಯಾರು ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೋ ಅವರು ದೇಶವನ್ನು ನೂರು, ಇನ್ನೂರು, ಐನೂರು ವರ್ಷ ಹಿಂದಕ್ಕೊಯ್ಯಲು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿ, ನಾವು ಇಂದು ಸಂವಿಧಾನವನ್ನು ರಕ್ಷಿಸಲಿಕ್ಕಾಗಿ ಇಲ್ಲಿದ್ದೇವೆ, ನಮ್ಮನ್ನು ನಾವು ಒಂದು ಪಡೆಯನ್ನಾಗಿ ರೂಪಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...