Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...