Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...