Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...