Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...