Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...