Homeಮುಖಪುಟಇಂದು ಬಿ.ವಿ.ಕಾರಂತರ ಜನ್ಮದಿನ: 'ಭಾರತೀಯ ರಂಗಸಂಗೀತ ದಿನ'ವನ್ನಾಗಿ ಆಚರಿಸಲು ಆಗ್ರಹ

ಇಂದು ಬಿ.ವಿ.ಕಾರಂತರ ಜನ್ಮದಿನ: ‘ಭಾರತೀಯ ರಂಗಸಂಗೀತ ದಿನ’ವನ್ನಾಗಿ ಆಚರಿಸಲು ಆಗ್ರಹ

ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ- ಚೀನಿ

- Advertisement -
- Advertisement -

ರಂಗಭೀಷ್ಮ ಎಂದೇ ಪ್ರಖ್ಯಾತವಾಗಿರುವ, ಭಾರತೀಯ ಮತ್ತು ಕನ್ನಡ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣರಾದ ಬಿ.ವಿ.ಕಾರಂತರ ಜನ್ಮದಿನ ಇಂದು. ಈ ದಿನವನ್ನು “ಭಾರತೀಯ ರಂಗಸಂಗೀತ ದಿನ” ಎಂದು ಘೋಷಿಸಬೇಕೆಂದು ಮೈಸೂರು ರಂಗಾಯಣದ ಮುಂದಾಳತ್ವದಲ್ಲಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ.

ರಂಗಸಂಗೀತಕ್ಕೆ ಕಾರಂತರ ಕೊಡುಗೆ ಅನನ್ಯವಾದದ್ದು. ಭಾರತೀಯ ರಂಗಸಂಗೀತಕ್ಕೆ ಮಾಂತ್ರಿಕ ಸ್ಪರ್ಶ ನೀಡಿ, ಶಾಸ್ತ್ರೀಯ ಸಂಗೀತದ ಚೌಕಟ್ಟನ್ನು ಮೀರಿ “ಆನ್ವಯಿಕ ಸಂಗೀತ” ಎಂಬ ಹೊಸ ಪ್ರಕಾರವನ್ನೇ ಹುಟ್ಟುಹಾಕಿದರು. ಇದಕ್ಕೆ ಸಾಕ್ಷಿ ಇವರು ನಿರ್ದೇಶಿಸಿದ ನಾಟಕಗಳು.

ಕಾರಂತರು ನಿರ್ದೇಶಿಸಿರುವ ಎಲ್ಲಾ ನಾಟಕಗಳಿಗೂ ಸ್ವತಃ ತಾವೇ ಸಂಗೀತ ನಿರ್ದೇಶನವನ್ನೂ ಮಾಡುತ್ತಿದ್ದರು. ಕರ್ನಾಟಕದ ಮೈಸೂರಿನಿಂದ ಹಿಡಿದು ಮಧ್ಯಪ್ರದೇಶದ ಭೂಪಾಲ್, ಮುಂಬೈ, ದೆಹಲಿ ಹಾಗೂ ವಿದೇಶಗಳಲ್ಲಿಯೂ ಸಹ ರಂಗಭೂಮಿಯ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

1977-81ರ ಅವಧಿಯಲ್ಲಿ ದೆಹಲಿ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರೂ ಆಗಿದ್ದರು. ನಂತರ ಮೈಸೂರಿಗೆ ಬಂದು, 1989ರಲ್ಲಿ, ಸರ್ಕಾರದ ಅಧೀನದಲ್ಲಿ ರಂಗಾಯಣ ಎಂಬ ರೆಪರ್ಟರಿಯನ್ನು ಸ್ಥಾಪಿಸುವುದರೊಂದಿಗೆ ಕರ್ನಾಟಕದ ಆಧುನಿಕ ರಂಗಭೂಮಿಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದರು. ಹಾಗಾಗಿ ಪದ್ಮಶ್ರೀ ಬಿ.ವಿ.ಕಾರಂತರ ಜನ್ಮದಿನವನ್ನು “ಭಾರತೀಯ ರಂಗಸಂಗೀತ ದಿನ”ವನ್ನಾಗಿ ಆಚರಿಸಬೇಕೆಂದು ಮೈಸೂರು ರಂಗಾಯಣದ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ಪತ್ರಬರೆದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರಂತರು, “ಏವಂ ಇಂದ್ರಜಿತ್, ಹಯವದನ, ಸಂಕ್ರಾಂತಿ, ಈಡಿಪಸ್, ಜೋಕುಮಾರಸ್ವಾಮಿ, ಪಂಜರಶಾಲೆ, ಗೋಕುಲ ನಿರ್ಗಮನ, ಸತ್ತವರ ನೆರಳು ಸೇರಿ 52 ನಾಟಕಗಳ ನಿರ್ದೇಶನ ಮಾಡಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಚಲನಚಿತ್ರಕ್ಕೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಸ್ವತಃ ಚೋಮನದುಡಿ ಚಿತ್ರವನ್ನು ನಿರ್ದೇಶಿಸಿ ರಾಷ್ಟ್ರೀಯ ಸ್ವರ್ಣಪದಕ ಪ್ರಶಸ್ತಿಯನ್ನು ಪಡೆದಿದ್ದರು. ಹಂಸಗೀತೆ, ಚೋಮನದುಡಿ, ಆದಿಶಂಕರ, ಫಣಿಯಮ್ಮ ಸೇರಿದಂತೆ ಅನೇಕ ಚಿತ್ರಗಳಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ. ಈ ಮಹತ್ತರ ಸಾಧನೆಗಾಗಿ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕೇಂದ್ರ ಸರಕಾರದ ಪದ್ಮಶ್ರೀ, ಮಧ್ಯ ಪ್ರದೇಶದ ಕಾಳಿದಾಸ ಸಮ್ಮಾನ್, ರಾಜ್ಯ ಸರಕಾರದ ಗುಬ್ಬಿ ವೀರಣ್ಣ ಪ್ರಶಸ್ತಿಗಳು ಲಭಿಸಿವೆ.”

ರಂಗಸಂಗೀತದ ಕುರಿತಂತೆ ಕಾರಂತರ ಕೆಲವು ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಭಾರತದ ಉದ್ದಗಲಕ್ಕೂ ಕಾರಂತರ ಆನ್ವಯಿಕ ಸಂಗೀತದ ಹೊಸ ಪ್ರಕಾರವನ್ನು ಅವರ ಶಿಷ್ಯರು ಮುಂದುವರಿಸಿದ್ದಾರೆ. ಕಾರಂತರ ಕೊನೆಯ ಕಾಲದವರೆಗೂ ಅವರ ಜೊತೆಗಿದ್ದ ಮತ್ತು ಅವರು ಸಂಗೀತ ನಿರ್ದೇಶನ ಮಾಡಿರುವ ಎಲ್ಲಾ ನಾಟಕಗಳಲ್ಲಿಯೂ ಅವರಿಗೆ ಸಹಾಯಕರಾಗಿದ್ದುಕೊಂಡಿದ್ದ ಮತ್ತು ಇಂದು ಸ್ವತಃ ಕರ್ನಾಟಕದ ಪ್ರಮುಖ ಸಂಗೀತ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿರುವ ಶ್ರೀನಿವಾಸ್ ಭಟ್ (ಚೀನಿ)ರವರು ನಾನುಗೌರಿ.ಕಾಂನೊಂದಿಗೆ ಮಾತನಾಡಿ ಕಾರಂತರೊಂದಿಗಿನ ನೆನಪುಗಳನ್ನು ಹಂಚಿಕೊಂಡರು.

“ಭಾರತೀಯ ರಂಗ ಸಂಗೀತದ ಇತಿಹಾಸದಲ್ಲಿ ಕಾರಂತರ ಹೆಸರು ಯಾಕೆ ಪ್ರಮುಖ ಎಂದರೆ, ಕಾರಂತರು, ಮಾತುಗಳನ್ನೂ ಕೂಡ ಸಂಗೀತದ ಚೌಕಟ್ಟಿಗೆ ಅಳವಡಿಸಿದರು. ಉದ್ಗಾರಗಳನ್ನೂ ಕೂಡ ಸಂಗೀತಕ್ಕೆ ಅಳವಡಿಸಿ, ಎಂಥವರೂ ಹಾಡುವಂತೆ ಮಾಡಿದರು. ಅವರು ಸಂಯೋಜಿಸಿದ ಹಾಡುಗಳನ್ನು ಕೇಳಿದರೆ ಅದು ಹಾಡು ಎನಿಸುವುದಿಲ್ಲ. ಆದರೂ ಅದರೊಳಗೆ ಸಂಗೀತದ ಎಲ್ಲಾ ಅಂಶಗಳೂ ಅಡಕವಾಗಿರುತ್ತವೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

“ಕಾರಂತರು ತುಂಬಾ ಪ್ರಾಯೋಗಿಕವಾದ ಮನೋಭಾವವುಳ್ಳವರು. ನಾಟಕ ಮಾಡುವವರು ಮೊದಲು ಸಮಾಜದಲ್ಲಿ ಸಕಲೆಂಟು ಅನುಭವಗಳನ್ನೂ ಪಡೆದುಕೊಂಡಿರಬೇಕು, ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಬೇಕು ಎನ್ನುತ್ತಿದ್ದರು. ನಿಜವಾದ ಪಾಠಶಾಲೆ ಸಮಾಜ ಎಂದು ನಟರನ್ನೆಲ್ಲಾ ಕ್ಷೇತ್ರಾನುಭವ ಪಡೆಯಲು ಕಳುಹಿಸುತ್ತಿದ್ದರು” ಎಂದು ಹೇಳಿದರು.

ಚೀನಿಯರವರು ಕಾರಂತರ ಬಗ್ಗೆ ಕೆಲವು ಸ್ವಾರಸ್ಯಕರ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಈ ವೀಡಿಯೋದಲ್ಲಿ ನೋಡಬಹುದು.

ಕಾರಂತರ ಶಿಷ್ಯ ಪರಂಪರೆಯಲ್ಲಿ ಕರ್ನಾಟಕದಲ್ಲಿರುವವರು ಇವರೊಬ್ಬರೇ. ಹಾಗಾಗಿ ಇಂದು ಸಂಜೆ ಮೈಸೂರಿನ ರಂಗಾಯಣದಲ್ಲಿ ಭಾರತೀಯ ರಂಗ ಸಂಗೀತ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಚೀನಿಯವರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...