Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...