Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...