Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...