Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...