Homeಮುಖಪುಟಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು ...!

ಇಂದು ’ಜಾಗತಿಕ ಹುಲಿ ದಿನ’ | ಭಾರತದಲ್ಲಿವೆ ಅತಿ ಹೆಚ್ಚು ಹುಲಿಗಳು …!

- Advertisement -
- Advertisement -

ಜುಲೈ 29 ನ್ನು ’ಜಾಗತಿಕ ಹುಲಿ ದಿನ’ ಎಂದು ಆಚರಿಸಲಾಗುತ್ತಿದೆ. ಇದು ಹುಲಿ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ವಾರ್ಷಿಕ ಆಚರಣೆಯಾಗಿದೆ. ಹುಲಿಗಳನ್ನು ಹೊಂದಿರುವ 13 ರಾಷ್ಟ್ರಗಳು 2010 ರಂದು ಸೇಂಟ್ ಪೀಟರ್‌ ಬರ್ಗ್‌ನಲ್ಲಿ ಶೃಂಗಸಭೆ ನಡೆಸಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಐತಿಹಾಸಿಕ ಬದ್ದತೆಯನ್ನು ಘೋಷಿಸಿದ್ದವು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಜಾಗತಿಕ ಹುಲಿ ದಿನವನ್ನಾಗಿ ಆಚರಿಸಲಾಗುತ್ತದೆ.

’ಜಾಗತಿಕ ಹುಲಿ ದಿನ’ವು ಹುಲಿಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜಾಗತಿಕ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ಹುಲಿ ಸಂರಕ್ಷಣಾ ವಿಷಯಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಬೆಂಬಲವನ್ನು ನೀಡುವ ಗುರಿಯನ್ನು ಹೊಂದಿದೆ.

ಫೋಟೋ: ದಿ ಇಂಡಿಯನ್ ಎಕ್ಸ್‌ಪ್ರೆಸ್

ಈ ಪ್ರಯತ್ನದಿಂದಾಗಿ ಭಾರತ, ರಷ್ಯಾ ಮತ್ತು ನೇಪಾಳ ಕಾಡಿನಲ್ಲಿರುವ ಜಾಗತಿಕ ಹುಲಿಗಳ ಸಂಖ್ಯೆಯು ಕೆಲವು ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಳೆದ ಒಂದು ಶತಮಾನದಲ್ಲಿ ಜಗತ್ತಿನಲ್ಲಿ 97% ದಷ್ಟು ಹುಲಿಗಳು ನಾಶವಾಗಿವೆ ಎಂದು ಅಧ್ಯಯನಗಳು ಹೇಳುತ್ತದೆ. ಜಾಗತಿಕವಾಗಿ ಹುಲಿಗಳ ಸಂಖ್ಯೆ ಕಳೆದ ನೂರು ವರ್ಷಗಳಲ್ಲೇ ಇದೆ ಮೊದಲ ಬಾರಿಗೆ ಹೆಚ್ಚಳವಾಗಿದೆ. ಪ್ರಸ್ತುತ ವಿಶ್ವದ ಕಾಡಿನಲ್ಲಿ 3890 ಹುಲಿಗಳಿವೆ ಎಂದು WWF (ವರ್ಲ್ಡ್‌ ವೈಡ್‌ಲೈಫ್‌ ಫಂಡ್) ಹೇಳುತ್ತದೆ. ಅದರಲ್ಲೂ 75% ಅಂದರೆ ಹುಲಿಗಳು ಭಾರತದಲ್ಲಿವೆ ಎಂಬುವುದು ವಿಶೇಷವಾಗಿದೆ.

ಅದಲ್ಲದೆ ಡಬ್ಲ್ಯುಡಬ್ಲ್ಯುಎಫ್ ಪ್ರಕಾರ ಅಮೆರಿಕಾ (ಸುಮಾರು 5000 ದಿಂದ 7000) ದಲ್ಲಿ ಸಾಕು ಹುಲಿಗಳು ಇವೆ ಎನ್ನಲಾಗಿದೆ. ಅಲ್ಲಿ ಕಾಡು ಪ್ರಾಣಿಗಳನ್ನು ಸಾಕದಿರುವಂತೆ ಯಾವುದೆ ಕಾನೂನುಗಳಿಲ್ಲ. ಹುಲಿಯನ್ನು ಆನ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ. ಐದು ತಿಂಗಳ ಹುಲಿ ಮರಿಗೆ US $ 14,000 ಬೆಲೆಯನ್ನು ನಿಗದಿಪಡಿಸಲಾಗಿದೆ.

ಈ ಕುರಿತು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕಾರ್ ಟ್ವೀಟ್‌ ಮಾಡಿ “1973 ರಲ್ಲಿ ಹುಲಿ ಸಂರಕ್ಷಣಾ ಯೋಜನೆ ಆರಂಭಿಸಿದಾಗ ಕೇವಲ 09 ರಷ್ಟಿದ್ದ ಹುಲಿ ಅಭಯಾರಣ್ಯಗಳ ಸಂಖ್ಯೆ ಈಗ 50ಕ್ಕೆ ತಲುಪಿದೆ. ಭಾರತದಲ್ಲಿ 2967 ಹುಲಿಗಳಿವೆ. ಹುಲಿಗಳ ಆಹಾರ ಸರಪಳಿಯ ಉತ್ತುಂಗದಲ್ಲಿದೆ. ಹೆಚ್ಚಿದ ಹುಲಿಗಳಿರುವುದು ದೃಢವಾದ ಜೈವಿಕ-ವೈವಿಧ್ಯತೆಗೆ ಸಾಕ್ಷಿಯಾಗಿದೆ” ಎಂದಿದ್ದಾರೆ.


ಓದಿ: ಪರಿಸರ ಮಾಲಿನ್ಯಕ್ಕೆ ಯಾರನ್ನು ದೂಷಿಸಬೇಕು? ನಾವೇನು ಮಾಡಬೇಕು?


ಹುಲಿ ದಿನಾಚರಣೆಯ ಬಗ್ಗೆ ಮಾತನಾಡಿದ ವನ್ಯಜೀವಿ ತಜ್ಞ ಅನೂಪ್ ಪ್ರಕಾಶ್, “ಹುಲಿಯು ನಮ್ಮ ಜೈವಿಕ ಪರಿಸರದ ಬಹಳ ಮುಖ್ಯವಾದ ಪ್ರಾಣಿಯಾಗಿದೆ. ಒಂದು ಹುಲಿ ಇರಬೇಕೆಂದರೆ 5 ಚದರ ಕಿ.ಮೀ. ನಿಂದ ಹಿಡಿದು 100 ಚ.ಕಿ.ಮೀ. ಜಾಗ ಬೇಕಾಗುತ್ತದೆ. ಅಂದರೆ ಒಂದು ಹುಲಿ ಚೆನ್ನಾಗಿದೆ ಎಂದರೆ ಅಲ್ಲಿ ಪರಿಸರ ಸಮತೋಲನವಿದೆ, ಅದಿರುವ ವಿಸ್ತಾರವಾದ ಪ್ರದೇಶದ ಅರಣ್ಯ ಚೆನ್ನಾಗಿದೆ, ಅದಕ್ಕೆ ಆಹಾರವಾದ ಜಿಂಕೆ ತರದ ಪ್ರಾಣಿಗಳು, ಅದಕ್ಕೆ ವಾಸಿಸಲು ಯೋಗ್ಯವಾದ ಸ್ಥಳ, ನೀರು ಲಭ್ಯವಿದೆ ಹಾಗೂ ಮನುಷ್ಯರ ಚಲನೆ ಇಲ್ಲವೆಂದರ್ಥ. ಹುಲಿಯನ್ನು ಉಳಿಸಿದರೆ ಇತರ ಪ್ರಭೇದದ ಜೀವಿಗಳನ್ನು ಕೂಡಾ ಉಳಿಸಿದಂತೆ” ಎಂದು ಹೇಳುತ್ತಾರೆ.

ಫೋಟೋ ಕೃಪೆ: ದಿ ಗ್ರೇಟ್ ಪಾಜೆಕ್ಟ್

ಭಾರತ ಹುಲಿ ಸಂರಕ್ಷಣೆಯಲ್ಲಿ ಜಾಗತಿಕವಾಗಿ ಗುರುತಿಸಿಕೊಂಡರೂ ಕೂಡಾ ಇಲ್ಲಿ ಎಲ್ಲವೂ ಚೆನ್ನಾಗಿಲ್ಲ ಎಂದು ಅನೂಪ್ ಆತಂಕ ವ್ಯಕ್ತಪಡಿಸುತ್ತಾರೆ. “ಅಭಿವೃದ್ದಿಯ ಹೆಸರಲ್ಲಿ ಅರಣ್ಯ ನಾಶ ಹೆಚ್ಚಿದೆ. ಹುಲಿಗಳಿರುವ ಪ್ರದೇಶಗಳಲ್ಲೇ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದೆ. ನದಿ ತಿರುವು ಎಂದು ಹುಲಿಗಳ ಪ್ರದೇಶಗಳನ್ನು ನಾಶ ಮಾಡಲಾಗುತ್ತದೆ. ಇವೆಲ್ಲವು ನಡೆಯುತ್ತಿರುವ ಸಂಧರ್ಭದಲ್ಲಿ ಸರ್ಕಾರ ಹೆಸರಿಗೆ ಮಾತ್ರ ಹುಲಿ ದಿನವನ್ನಾಗಿ ಆಚರಿಸುವುದನ್ನು ಬಿಟ್ಟು ವಾಸ್ತವವಾಗಿ ಹುಲಿ ಸಂರಕ್ಷಣೆಗೆ ಒತ್ತುಕೊಡಬೇಕು” ಎಂದು  ಆಗ್ರಹಿಸಿದ್ದಾರೆ.

ಬಂಗಾಲಿ ಹುಲಿ, ಕ್ಯಾಸ್ಪಿಯನ್ ಹುಲಿ, ಸೈಬೀರಿಯನ್ ಹುಲಿ, ದಕ್ಷಿಣ ಚೀನಾ ಹುಲಿ, ಇಂಡೋಚೈನಿಸ್ ಹುಲಿ, ಮಲಯನ್ ಹುಲಿ, ಜಾವಾ ಹುಲಿ, ಬಾಲಿ ಹುಲಿ, ಸುಮಾತ್ರ ಹುಲಿ ಹೀಗೆ ಹುಲಿಯನ್ನು ಹಲವಾರು ಪ್ರಭೇದಗಳನ್ನಾಗಿ ಗುರುತಿಸಲಾಗಿದೆ.

ಇವುಗಳಲ್ಲಿ ಬಾಲಿ, ಜಾವಾ ಹಾಗೂ ಕ್ಯಾಸ್ಪಿಯನ್ ಹುಲಿ ಪ್ರಬೇಧಗಳು 1980ರ ಹೊತ್ತಿಗೆ ನಿರ್ನಾಮವಾಗಿವೆ ಎನ್ನಲಾಗಿದೆ.


ಓದಿ:

ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...