Homeಮುಖಪುಟಇಂದು ವಿಶ್ವ ಓಝೋನ್‌ ದಿನ - ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಇಂದು ವಿಶ್ವ ಓಝೋನ್‌ ದಿನ – ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಕ್ಷೀಣಿಸಲು ಶೇಕಡಾ 99ರಷ್ಟು ಕಾರಣ

- Advertisement -
- Advertisement -

ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…?

ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ ತಿಳಿದುಕೊಳ್ಳಲೇ ಬೇಕು.

ಇದನ್ನೂ ಓದಿ: ನೇಚರ್ ವಿಜ್ಞಾನ ಪತ್ರಿಕೆಯ 150 ವರ್ಷಗಳು : ಅನುರಣನ – ಡಾ.ಟಿ.ಎಸ್‌ ಚನ್ನೇಶ್‌

ವಾಯುಮಂಡಲದ ಸ್ಟ್ರಾಟೋಸ್ಫಿಯರ್‌ನ 15-20 ಕಿ.ಮೀ ಮೇಲ್ಪಟ್ಟ ಪ್ರದೇಶದಲ್ಲಿರುವ ಓಝೋನ್ ಪದರ ಭೂಮಿಯ ಮೇಲೆ ಸೂರ್ಯನಿಂದ ಹೊರಹೊಮ್ಮುವ ಅತಿನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ. ಈ ಪದರವೇ ಇಲ್ಲದಿದ್ದರೇ, ಭೂಮಿಯ ಮೇಲೆ ಜೀವ ಸಂಕುಲವೇ ನಾಶವಾಗಿರುತ್ತಿತ್ತು. ಜೀವ ಸಂಕುಲದಲ್ಲಿ ಅಷ್ಟು ಪ್ರಮುಖ ಪಾತ್ರ ಓಝೋನ್ ಪಡೆದುಕೊಂಡಿದೆ.

PC:English Exercises

ಸೂರ್ಯನ ಬೆಳಕು ಇಲ್ಲದೇ ಭೂಮಂಡಲದಲ್ಲಿ ಜೀವನ ಸಾಧ್ಯವಿಲ್ಲ ಆದರೆ, ಸೂರ್ಯನ ಹೆಚ್ಚಿನ ನೇರಳಾತೀತ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶ ಮಾಡಿ, ಮಾನವನ ದೇಹ ಹಾಗೂ ಜಲಚರ ಸೇರಿದಂತೆ ಜೀವ ಸಂಕುಲಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನುಈ ಕಿರಣಗಳನ್ನು ತಡೆದು ಜೀವ ಸಂಕುಲಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

ಆದರೆ ಮಾನವ ಮಾಡುವ ಕೆಲಸಗಳಿಂದ, ಬಳಸುವ ವಸ್ತುಗಳಿಂದ ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಸವೆಯಲು ಶೇಕಡಾ 99ರಷ್ಟು ಕಾರಣವಾಗಿದೆ.

ಹವಾಮಾನ ವೈಪರಿತ್ಯ ಹಾಗೂ ತಾಪಮಾನ ಏರಿಕೆಗೆ ಕಾರಣವಾಗುವ ಅನಿಲಗಳಾದ ಹೈಡ್ರೋಫ್ಲೋರೊಕಾರ್ಬನ್ ಅನ್ನು ಹಂತಹಂತವಾಗಿ ಕಡಿಮೆಗೊಳಿಸಬೇಕು ಇದರಿಂದ ಓಝೋನ್ ಪದರದ ಸವಕಳಿಯನ್ನು ತಡೆಯಬಹುದು.

ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಹುಡುಕಲು ಇದನ್ನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

ಡಿಸೆಂಬರ್ 19, 1994 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವನ್ನು ಘೋಷಿಸಿತು. ಸೆಪ್ಟೆಂಬರ್ 16, 1987 ರಂದು, ವಿಶ್ವಸಂಸ್ಥೆ ಮತ್ತು ಇತರ 45 ದೇಶಗಳು ಮಾಂಟ್ರಿಯಲ್  ಪ್ರೊಟೋಕಾಲ್‌ಗೆ ಸಹಿ ಹಾಕಿದ್ದವು.

ಪ್ರತಿ ವರ್ಷ ಈ ದಿನವನ್ನುಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿಗೆ ಕಾರಣವಾಗುವ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಪದರವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

‘ಓಝೋನ್ ಫಾರ್ ಲೈಫ್’ ಎಂಬುದು ವಿಶ್ವ ಓಝೋನ್ ದಿನ 2020 ರ ಘೋಷಣೆಯಾಗಿತ್ತು. ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ, ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಎಂಬುವುದಾಗಿದೆ.

ಓಝೋನ್ ಪದರ ಕೆಲವ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ. ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ನಮ್ಮನ್ನು ರಕ್ಷಿಸುತ್ತಿರುವ ಈ ರಕ್ಷಾ ಕವಚವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಮುಂದಿನ ಪೀಳಿಗೆಗೆ ಆರೋಗ್ಯಯುತ, ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವ ಕರ್ತವ್ಯ ನಮ್ಮದು.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...