Homeಮುಖಪುಟಇಂದು ವಿಶ್ವ ಓಝೋನ್‌ ದಿನ - ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಇಂದು ವಿಶ್ವ ಓಝೋನ್‌ ದಿನ – ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಕ್ಷೀಣಿಸಲು ಶೇಕಡಾ 99ರಷ್ಟು ಕಾರಣ

- Advertisement -
- Advertisement -

ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…?

ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ ತಿಳಿದುಕೊಳ್ಳಲೇ ಬೇಕು.

ಇದನ್ನೂ ಓದಿ: ನೇಚರ್ ವಿಜ್ಞಾನ ಪತ್ರಿಕೆಯ 150 ವರ್ಷಗಳು : ಅನುರಣನ – ಡಾ.ಟಿ.ಎಸ್‌ ಚನ್ನೇಶ್‌

ವಾಯುಮಂಡಲದ ಸ್ಟ್ರಾಟೋಸ್ಫಿಯರ್‌ನ 15-20 ಕಿ.ಮೀ ಮೇಲ್ಪಟ್ಟ ಪ್ರದೇಶದಲ್ಲಿರುವ ಓಝೋನ್ ಪದರ ಭೂಮಿಯ ಮೇಲೆ ಸೂರ್ಯನಿಂದ ಹೊರಹೊಮ್ಮುವ ಅತಿನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ. ಈ ಪದರವೇ ಇಲ್ಲದಿದ್ದರೇ, ಭೂಮಿಯ ಮೇಲೆ ಜೀವ ಸಂಕುಲವೇ ನಾಶವಾಗಿರುತ್ತಿತ್ತು. ಜೀವ ಸಂಕುಲದಲ್ಲಿ ಅಷ್ಟು ಪ್ರಮುಖ ಪಾತ್ರ ಓಝೋನ್ ಪಡೆದುಕೊಂಡಿದೆ.

PC:English Exercises

ಸೂರ್ಯನ ಬೆಳಕು ಇಲ್ಲದೇ ಭೂಮಂಡಲದಲ್ಲಿ ಜೀವನ ಸಾಧ್ಯವಿಲ್ಲ ಆದರೆ, ಸೂರ್ಯನ ಹೆಚ್ಚಿನ ನೇರಳಾತೀತ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶ ಮಾಡಿ, ಮಾನವನ ದೇಹ ಹಾಗೂ ಜಲಚರ ಸೇರಿದಂತೆ ಜೀವ ಸಂಕುಲಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನುಈ ಕಿರಣಗಳನ್ನು ತಡೆದು ಜೀವ ಸಂಕುಲಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

ಆದರೆ ಮಾನವ ಮಾಡುವ ಕೆಲಸಗಳಿಂದ, ಬಳಸುವ ವಸ್ತುಗಳಿಂದ ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಸವೆಯಲು ಶೇಕಡಾ 99ರಷ್ಟು ಕಾರಣವಾಗಿದೆ.

ಹವಾಮಾನ ವೈಪರಿತ್ಯ ಹಾಗೂ ತಾಪಮಾನ ಏರಿಕೆಗೆ ಕಾರಣವಾಗುವ ಅನಿಲಗಳಾದ ಹೈಡ್ರೋಫ್ಲೋರೊಕಾರ್ಬನ್ ಅನ್ನು ಹಂತಹಂತವಾಗಿ ಕಡಿಮೆಗೊಳಿಸಬೇಕು ಇದರಿಂದ ಓಝೋನ್ ಪದರದ ಸವಕಳಿಯನ್ನು ತಡೆಯಬಹುದು.

ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಹುಡುಕಲು ಇದನ್ನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

ಡಿಸೆಂಬರ್ 19, 1994 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವನ್ನು ಘೋಷಿಸಿತು. ಸೆಪ್ಟೆಂಬರ್ 16, 1987 ರಂದು, ವಿಶ್ವಸಂಸ್ಥೆ ಮತ್ತು ಇತರ 45 ದೇಶಗಳು ಮಾಂಟ್ರಿಯಲ್  ಪ್ರೊಟೋಕಾಲ್‌ಗೆ ಸಹಿ ಹಾಕಿದ್ದವು.

ಪ್ರತಿ ವರ್ಷ ಈ ದಿನವನ್ನುಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿಗೆ ಕಾರಣವಾಗುವ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಪದರವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

‘ಓಝೋನ್ ಫಾರ್ ಲೈಫ್’ ಎಂಬುದು ವಿಶ್ವ ಓಝೋನ್ ದಿನ 2020 ರ ಘೋಷಣೆಯಾಗಿತ್ತು. ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ, ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಎಂಬುವುದಾಗಿದೆ.

ಓಝೋನ್ ಪದರ ಕೆಲವ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ. ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ನಮ್ಮನ್ನು ರಕ್ಷಿಸುತ್ತಿರುವ ಈ ರಕ್ಷಾ ಕವಚವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಮುಂದಿನ ಪೀಳಿಗೆಗೆ ಆರೋಗ್ಯಯುತ, ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವ ಕರ್ತವ್ಯ ನಮ್ಮದು.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....