Homeಮುಖಪುಟಇಂದು ವಿಶ್ವ ಓಝೋನ್‌ ದಿನ - ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಇಂದು ವಿಶ್ವ ಓಝೋನ್‌ ದಿನ – ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಕ್ಷೀಣಿಸಲು ಶೇಕಡಾ 99ರಷ್ಟು ಕಾರಣ

- Advertisement -
- Advertisement -

ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…?

ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ ತಿಳಿದುಕೊಳ್ಳಲೇ ಬೇಕು.

ಇದನ್ನೂ ಓದಿ: ನೇಚರ್ ವಿಜ್ಞಾನ ಪತ್ರಿಕೆಯ 150 ವರ್ಷಗಳು : ಅನುರಣನ – ಡಾ.ಟಿ.ಎಸ್‌ ಚನ್ನೇಶ್‌

ವಾಯುಮಂಡಲದ ಸ್ಟ್ರಾಟೋಸ್ಫಿಯರ್‌ನ 15-20 ಕಿ.ಮೀ ಮೇಲ್ಪಟ್ಟ ಪ್ರದೇಶದಲ್ಲಿರುವ ಓಝೋನ್ ಪದರ ಭೂಮಿಯ ಮೇಲೆ ಸೂರ್ಯನಿಂದ ಹೊರಹೊಮ್ಮುವ ಅತಿನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ. ಈ ಪದರವೇ ಇಲ್ಲದಿದ್ದರೇ, ಭೂಮಿಯ ಮೇಲೆ ಜೀವ ಸಂಕುಲವೇ ನಾಶವಾಗಿರುತ್ತಿತ್ತು. ಜೀವ ಸಂಕುಲದಲ್ಲಿ ಅಷ್ಟು ಪ್ರಮುಖ ಪಾತ್ರ ಓಝೋನ್ ಪಡೆದುಕೊಂಡಿದೆ.

PC:English Exercises

ಸೂರ್ಯನ ಬೆಳಕು ಇಲ್ಲದೇ ಭೂಮಂಡಲದಲ್ಲಿ ಜೀವನ ಸಾಧ್ಯವಿಲ್ಲ ಆದರೆ, ಸೂರ್ಯನ ಹೆಚ್ಚಿನ ನೇರಳಾತೀತ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶ ಮಾಡಿ, ಮಾನವನ ದೇಹ ಹಾಗೂ ಜಲಚರ ಸೇರಿದಂತೆ ಜೀವ ಸಂಕುಲಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನುಈ ಕಿರಣಗಳನ್ನು ತಡೆದು ಜೀವ ಸಂಕುಲಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

ಆದರೆ ಮಾನವ ಮಾಡುವ ಕೆಲಸಗಳಿಂದ, ಬಳಸುವ ವಸ್ತುಗಳಿಂದ ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಸವೆಯಲು ಶೇಕಡಾ 99ರಷ್ಟು ಕಾರಣವಾಗಿದೆ.

ಹವಾಮಾನ ವೈಪರಿತ್ಯ ಹಾಗೂ ತಾಪಮಾನ ಏರಿಕೆಗೆ ಕಾರಣವಾಗುವ ಅನಿಲಗಳಾದ ಹೈಡ್ರೋಫ್ಲೋರೊಕಾರ್ಬನ್ ಅನ್ನು ಹಂತಹಂತವಾಗಿ ಕಡಿಮೆಗೊಳಿಸಬೇಕು ಇದರಿಂದ ಓಝೋನ್ ಪದರದ ಸವಕಳಿಯನ್ನು ತಡೆಯಬಹುದು.

ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಹುಡುಕಲು ಇದನ್ನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

ಡಿಸೆಂಬರ್ 19, 1994 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವನ್ನು ಘೋಷಿಸಿತು. ಸೆಪ್ಟೆಂಬರ್ 16, 1987 ರಂದು, ವಿಶ್ವಸಂಸ್ಥೆ ಮತ್ತು ಇತರ 45 ದೇಶಗಳು ಮಾಂಟ್ರಿಯಲ್  ಪ್ರೊಟೋಕಾಲ್‌ಗೆ ಸಹಿ ಹಾಕಿದ್ದವು.

ಪ್ರತಿ ವರ್ಷ ಈ ದಿನವನ್ನುಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿಗೆ ಕಾರಣವಾಗುವ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಪದರವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

‘ಓಝೋನ್ ಫಾರ್ ಲೈಫ್’ ಎಂಬುದು ವಿಶ್ವ ಓಝೋನ್ ದಿನ 2020 ರ ಘೋಷಣೆಯಾಗಿತ್ತು. ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ, ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಎಂಬುವುದಾಗಿದೆ.

ಓಝೋನ್ ಪದರ ಕೆಲವ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ. ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ನಮ್ಮನ್ನು ರಕ್ಷಿಸುತ್ತಿರುವ ಈ ರಕ್ಷಾ ಕವಚವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಮುಂದಿನ ಪೀಳಿಗೆಗೆ ಆರೋಗ್ಯಯುತ, ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವ ಕರ್ತವ್ಯ ನಮ್ಮದು.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...