Homeಮುಖಪುಟಇಂದು ವಿಶ್ವ ಓಝೋನ್‌ ದಿನ - ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಇಂದು ವಿಶ್ವ ಓಝೋನ್‌ ದಿನ – ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಕ್ಷೀಣಿಸಲು ಶೇಕಡಾ 99ರಷ್ಟು ಕಾರಣ

- Advertisement -
- Advertisement -

ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…?

ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ ತಿಳಿದುಕೊಳ್ಳಲೇ ಬೇಕು.

ಇದನ್ನೂ ಓದಿ: ನೇಚರ್ ವಿಜ್ಞಾನ ಪತ್ರಿಕೆಯ 150 ವರ್ಷಗಳು : ಅನುರಣನ – ಡಾ.ಟಿ.ಎಸ್‌ ಚನ್ನೇಶ್‌

ವಾಯುಮಂಡಲದ ಸ್ಟ್ರಾಟೋಸ್ಫಿಯರ್‌ನ 15-20 ಕಿ.ಮೀ ಮೇಲ್ಪಟ್ಟ ಪ್ರದೇಶದಲ್ಲಿರುವ ಓಝೋನ್ ಪದರ ಭೂಮಿಯ ಮೇಲೆ ಸೂರ್ಯನಿಂದ ಹೊರಹೊಮ್ಮುವ ಅತಿನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ. ಈ ಪದರವೇ ಇಲ್ಲದಿದ್ದರೇ, ಭೂಮಿಯ ಮೇಲೆ ಜೀವ ಸಂಕುಲವೇ ನಾಶವಾಗಿರುತ್ತಿತ್ತು. ಜೀವ ಸಂಕುಲದಲ್ಲಿ ಅಷ್ಟು ಪ್ರಮುಖ ಪಾತ್ರ ಓಝೋನ್ ಪಡೆದುಕೊಂಡಿದೆ.

PC:English Exercises

ಸೂರ್ಯನ ಬೆಳಕು ಇಲ್ಲದೇ ಭೂಮಂಡಲದಲ್ಲಿ ಜೀವನ ಸಾಧ್ಯವಿಲ್ಲ ಆದರೆ, ಸೂರ್ಯನ ಹೆಚ್ಚಿನ ನೇರಳಾತೀತ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶ ಮಾಡಿ, ಮಾನವನ ದೇಹ ಹಾಗೂ ಜಲಚರ ಸೇರಿದಂತೆ ಜೀವ ಸಂಕುಲಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನುಈ ಕಿರಣಗಳನ್ನು ತಡೆದು ಜೀವ ಸಂಕುಲಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

ಆದರೆ ಮಾನವ ಮಾಡುವ ಕೆಲಸಗಳಿಂದ, ಬಳಸುವ ವಸ್ತುಗಳಿಂದ ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಸವೆಯಲು ಶೇಕಡಾ 99ರಷ್ಟು ಕಾರಣವಾಗಿದೆ.

ಹವಾಮಾನ ವೈಪರಿತ್ಯ ಹಾಗೂ ತಾಪಮಾನ ಏರಿಕೆಗೆ ಕಾರಣವಾಗುವ ಅನಿಲಗಳಾದ ಹೈಡ್ರೋಫ್ಲೋರೊಕಾರ್ಬನ್ ಅನ್ನು ಹಂತಹಂತವಾಗಿ ಕಡಿಮೆಗೊಳಿಸಬೇಕು ಇದರಿಂದ ಓಝೋನ್ ಪದರದ ಸವಕಳಿಯನ್ನು ತಡೆಯಬಹುದು.

ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಹುಡುಕಲು ಇದನ್ನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

ಡಿಸೆಂಬರ್ 19, 1994 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವನ್ನು ಘೋಷಿಸಿತು. ಸೆಪ್ಟೆಂಬರ್ 16, 1987 ರಂದು, ವಿಶ್ವಸಂಸ್ಥೆ ಮತ್ತು ಇತರ 45 ದೇಶಗಳು ಮಾಂಟ್ರಿಯಲ್  ಪ್ರೊಟೋಕಾಲ್‌ಗೆ ಸಹಿ ಹಾಕಿದ್ದವು.

ಪ್ರತಿ ವರ್ಷ ಈ ದಿನವನ್ನುಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿಗೆ ಕಾರಣವಾಗುವ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಪದರವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

‘ಓಝೋನ್ ಫಾರ್ ಲೈಫ್’ ಎಂಬುದು ವಿಶ್ವ ಓಝೋನ್ ದಿನ 2020 ರ ಘೋಷಣೆಯಾಗಿತ್ತು. ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ, ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಎಂಬುವುದಾಗಿದೆ.

ಓಝೋನ್ ಪದರ ಕೆಲವ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ. ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ನಮ್ಮನ್ನು ರಕ್ಷಿಸುತ್ತಿರುವ ಈ ರಕ್ಷಾ ಕವಚವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಮುಂದಿನ ಪೀಳಿಗೆಗೆ ಆರೋಗ್ಯಯುತ, ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವ ಕರ್ತವ್ಯ ನಮ್ಮದು.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....