Homeಮುಖಪುಟಇಂದು ವಿಶ್ವ ಓಝೋನ್‌ ದಿನ - ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಇಂದು ವಿಶ್ವ ಓಝೋನ್‌ ದಿನ – ನಮ್ಮ ರಕ್ಷಕ ಓಝೋನ್‌ಗೂ ಬೇಕಿದೆ ರಕ್ಷಣೆ!

ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಕ್ಷೀಣಿಸಲು ಶೇಕಡಾ 99ರಷ್ಟು ಕಾರಣ

- Advertisement -
- Advertisement -

ನಮಗೆ ಚಳಿಯಾದಾಗ ಯಾರಾದರೂ ಬೆಚ್ಚನೆಯ ಹೊದಿಕೆ ಕೊಟ್ಟರೇ, ಮಳೆಯಲ್ಲಿ ನೆನೆಯುವಾಗ, ಬಿಸಿಲಿನ ತಾಪ ತಡೆಯದಾದಾಗ ಯಾರಾದರೂ ಕೊಡೆ ಹಿಡಿದರೆ ಅದೆಷ್ಟು ಖುಷಿ, ಸುರಕ್ಷತಾ ಭಾವ ಅಲ್ಲವೇ.. ನಾವೇನೋ ಮನುಷ್ಯರು ಒಬ್ಬರಲ್ಲ ಒಬ್ಬರು ಸಹಾಯ ಮಾಡುತ್ತಾರೆ. ಕುಟುಂಬ, ಸಂಬಂಧಿಕರು, ಸ್ನೇಹಿತರು ಯಾರಾದರೂ… ಆದರೆ ಭೂಮಿಗೆ…?

ಇರುವುದೊಂದೇ ಭೂಮಿ…ಆದರೆ ನಿಮಗೆ ಗೊತ್ತೇ ಭೂಮಿಯನ್ನೂ ಕೂಡ ಒಂದು ಪದರ ಸೂರ್ಯನ ನೇರಳಾತೀತ ಕಿರಣಗಳಿಂದ ರಕ್ಷಿಸುತ್ತದೆ. ಅದೇ ಓಝೋನ್ ಪದರ. ಇಂದು ವಿಶ್ವ ಓಝೋನ್ ದಿನ. ಈ ದಿನದ ನೆಪದಲ್ಲಾದರೂ ಓಝೋನ್ ಪದರದ ಬಗ್ಗೆ ತಿಳಿದುಕೊಳ್ಳಲೇ ಬೇಕು.

ಇದನ್ನೂ ಓದಿ: ನೇಚರ್ ವಿಜ್ಞಾನ ಪತ್ರಿಕೆಯ 150 ವರ್ಷಗಳು : ಅನುರಣನ – ಡಾ.ಟಿ.ಎಸ್‌ ಚನ್ನೇಶ್‌

ವಾಯುಮಂಡಲದ ಸ್ಟ್ರಾಟೋಸ್ಫಿಯರ್‌ನ 15-20 ಕಿ.ಮೀ ಮೇಲ್ಪಟ್ಟ ಪ್ರದೇಶದಲ್ಲಿರುವ ಓಝೋನ್ ಪದರ ಭೂಮಿಯ ಮೇಲೆ ಸೂರ್ಯನಿಂದ ಹೊರಹೊಮ್ಮುವ ಅತಿನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುತ್ತದೆ. ಈ ಪದರವೇ ಇಲ್ಲದಿದ್ದರೇ, ಭೂಮಿಯ ಮೇಲೆ ಜೀವ ಸಂಕುಲವೇ ನಾಶವಾಗಿರುತ್ತಿತ್ತು. ಜೀವ ಸಂಕುಲದಲ್ಲಿ ಅಷ್ಟು ಪ್ರಮುಖ ಪಾತ್ರ ಓಝೋನ್ ಪಡೆದುಕೊಂಡಿದೆ.

PC:English Exercises

ಸೂರ್ಯನ ಬೆಳಕು ಇಲ್ಲದೇ ಭೂಮಂಡಲದಲ್ಲಿ ಜೀವನ ಸಾಧ್ಯವಿಲ್ಲ ಆದರೆ, ಸೂರ್ಯನ ಹೆಚ್ಚಿನ ನೇರಳಾತೀತ ಕಿರಣಗಳು ಭೂಮಿಯನ್ನು ನೇರವಾಗಿ ಪ್ರವೇಶ ಮಾಡಿ, ಮಾನವನ ದೇಹ ಹಾಗೂ ಜಲಚರ ಸೇರಿದಂತೆ ಜೀವ ಸಂಕುಲಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನುಈ ಕಿರಣಗಳನ್ನು ತಡೆದು ಜೀವ ಸಂಕುಲಕ್ಕೆ ಸಹಾಯಕವಾಗಿದೆ.

ಇದನ್ನೂ ಓದಿ: ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

ಆದರೆ ಮಾನವ ಮಾಡುವ ಕೆಲಸಗಳಿಂದ, ಬಳಸುವ ವಸ್ತುಗಳಿಂದ ಹವಾನಿಯಂತ್ರಣ ಸಾಧನಗಳು (ಎಸಿ), ಪ್ರಿಡ್ಜ್ ಮತ್ತು ಇತರೆ ಉತ್ಪನ್ನಗಳಿಂದ ಬಿಡುಗಡೆಯಾಗುವ ಅಪಾಯಕಾರಿ ರಾಸಾಯನಿಕಗಳು ಓಝೋನ್ ಪದರ ಸವೆಯಲು ಶೇಕಡಾ 99ರಷ್ಟು ಕಾರಣವಾಗಿದೆ.

ಹವಾಮಾನ ವೈಪರಿತ್ಯ ಹಾಗೂ ತಾಪಮಾನ ಏರಿಕೆಗೆ ಕಾರಣವಾಗುವ ಅನಿಲಗಳಾದ ಹೈಡ್ರೋಫ್ಲೋರೊಕಾರ್ಬನ್ ಅನ್ನು ಹಂತಹಂತವಾಗಿ ಕಡಿಮೆಗೊಳಿಸಬೇಕು ಇದರಿಂದ ಓಝೋನ್ ಪದರದ ಸವಕಳಿಯನ್ನು ತಡೆಯಬಹುದು.

ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಝೋನ್ ದಿನವನ್ನು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಪರಿಹಾರಗಳನ್ನು ಹುಡುಕಲು ಇದನ್ನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನದ ಇತಿಹಾಸ

ಡಿಸೆಂಬರ್ 19, 1994 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವನ್ನು ಘೋಷಿಸಿತು. ಸೆಪ್ಟೆಂಬರ್ 16, 1987 ರಂದು, ವಿಶ್ವಸಂಸ್ಥೆ ಮತ್ತು ಇತರ 45 ದೇಶಗಳು ಮಾಂಟ್ರಿಯಲ್  ಪ್ರೊಟೋಕಾಲ್‌ಗೆ ಸಹಿ ಹಾಕಿದ್ದವು.

ಪ್ರತಿ ವರ್ಷ ಈ ದಿನವನ್ನುಓಝೋನ್ ಪದರದ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ದಿನವೆಂದು ಆಚರಿಸಲಾಗುತ್ತದೆ. ಓಝೋನ್ ಪದರದ ಸವಕಳಿಗೆ ಕಾರಣವಾಗುವ ವಸ್ತುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಪದರವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಯ್ತು #NoMoreBJP, #unemploymentday

‘ಓಝೋನ್ ಫಾರ್ ಲೈಫ್’ ಎಂಬುದು ವಿಶ್ವ ಓಝೋನ್ ದಿನ 2020 ರ ಘೋಷಣೆಯಾಗಿತ್ತು. ಈ ವರ್ಷದ ಓಜೋನ್‌ ದಿನದ ಘೋಷವಾಕ್ಯ, ‘ನಮ್ಮನ್ನು, ನಮ್ಮ ಆಹಾರ ಮತ್ತು ಲಸಿಕೆಗಳನ್ನು ತಂಪಾಗಿರಿಸುವುದು!’ ಎಂಬುವುದಾಗಿದೆ.

ಓಝೋನ್ ಪದರ ಕೆಲವ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವ ಕೊಡೆ ಮಾತ್ರವಲ್ಲ. ಇಡೀ ಭೂಮಂಡಲದ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ನಮ್ಮನ್ನು ರಕ್ಷಿಸುತ್ತಿರುವ ಈ ರಕ್ಷಾ ಕವಚವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಮುಂದಿನ ಪೀಳಿಗೆಗೆ ಆರೋಗ್ಯಯುತ, ಬದುಕಲು ಯೋಗ್ಯವಾದ ಭೂಮಿಯನ್ನು ಕೊಡುವ ಕರ್ತವ್ಯ ನಮ್ಮದು.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...