Homeಮುಖಪುಟಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

ಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

- Advertisement -
- Advertisement -

ಸಾಮಾಜಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ನ್ಯಾಯೋಚಿತ ಜಾಗತೀಕರಣಕ್ಕಾಗಿ ವಿಶ್ವ ಸಾಮಾಜಿಕ ನ್ಯಾಯ ದಿನದ ಘೋಷಣೆಗೆ ಸಹಿ ಹಾಕಿತು.

ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲಕ ಬಡತನ, ಜಾತಿ ಮತ್ತು ದೈಹಿಕ ತಾರತಮ್ಯ, ಅನಕ್ಷರತೆ, ಸಾಮಾಜಿಕ ಮತ್ತು ಧಾರ್ಮಿಕ ತಾರತಮ್ಯವನ್ನು ಹೋಗಲಾಡಿಸುವುದು ಹಾಗೂ ಸಮಸ್ಯೆ ಪರಿಹರಿಸುವುದು ಪ್ರಮುಖ ಉದ್ದೇಶಗಳಾಗಿವೆ.

ಪ್ರತಿ ವರ್ಷ ಒಂದೊಂದು ಸದುದ್ದೇಶದೊಂದಿಗೆ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. 2022 ರ ವಿಶ್ವ ನ್ಯಾಯ ದಿನದ ಥೀಮ್ ‘ಔಪಚಾರಿಕ ಉದ್ಯೋಗದ ಮೂಲಕ ಸಾಮಾಜಿಕ ನ್ಯಾಯವನ್ನು ಸಾಧಿಸುವುದಾಗಿದೆ. ಕಳೆದ ವರ್ಷದ ಥೀಮ್ ‘ಡಿಜಿಟಲ್ ಆರ್ಥಿಕತೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಒಂದು ಕರೆ’ ಎಂಬುದಾಗಿತ್ತು.

ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಆರ್ಥಿಕ ಬೆಳವಣಿಗೆ, ಲಿಂಗ ಸಮಾನತೆ ಮತ್ತು ಮಾನವನ ಸಾರ್ವತ್ರಿಕ ಸಮಾನತೆ ಸಾಧಿಸುವ ಗುರಿಯೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನ ಘೋಷಣೆಯ ಹಿಂದಿನ ಆಲೋಚನೆಯಾಗಿದೆ.

ಬಡತನ, ನಿರುದ್ಯೋಗ, ಸಾಮಾಜಿಕ ಉನ್ನತಿ, ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆಯಂಥ ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಗುರುತಿಸುವ ಅಗತ್ಯವನ್ನು ಅಂಗೀಕರಿಸುವುದು. ಸಾಮಾಜಿಕ ಏಕೀಕರಣ ಮತ್ತು ಉದ್ಯೋಗದ ಗುರಿಯನ್ನು ಸಾಧಿಸುವತ್ತ ಗಮನಹರಿಸುವುದು. ಸಾಮಾಜಿಕ ಜವಾಬ್ದಾರಿಗಳು, ನ್ಯಾಯ ಮತ್ತು ಬಡತನ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಜನರನ್ನು ಪ್ರೋತ್ಸಾಹಿಸುವುದಾಗಿದೆ.

ಇಂದು ವಿಶ್ವದ ರಾಷ್ಟ್ರ ರಾಷ್ಟ್ರಗಳ ನಡುವೆ ಅಸಮಾನತೆ ಹೆಚ್ಚುತ್ತಿದೆ. ಕೆಲ ಮುಂದುವರಿದ ರಾಷ್ಟ್ರಗಳು ಇತರ ರಾಷ್ಟ್ರಗಳನ್ನು ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಂಡು ಶೋಷಿಸುತ್ತಿವೆ. ಜಾಗತೀಕರಣದಿಂದಾಗಿ ತೃತೀಯ ಜಗತ್ತಿನ ರಾಷ್ಟ್ರಗಳನ್ನು ತಮ್ಮ ಮಾರುಕಟ್ಟೆಯನ್ನಾಗಿ ಮಾಡಿಕೊಳ್ಳುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಸಮಸ್ಯೆಗಳನ್ನು ಚರ್ಚಿಸಲು ಸಾಮಾಜಿಕ ನ್ಯಾಯ ದಿನಗಳು ಉಪಯೋಗವಾಗಬೇಕಿವೆ.

ಸಾಮಾಜಿಕ ನ್ಯಾಯದ ವಿಶ್ವ ದಿನದ ಇತಿಹಾಸ:

ಜನರಲ್ ಅಸೆಂಬ್ಲಿ ತನ್ನ 63 ನೇ ಅಧಿವೇಶನದಲ್ಲಿ ನವೆಂಬರ್ 26, 2007 ರಂದು, ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅಂದಿನಿಂದ, ಪ್ರತಿ ವರ್ಷ ಫೆಬ್ರವರಿ 20 ನ್ನು ವಿಶ್ವದಾದ್ಯಂತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ 10ನೇ ಜೂನ್ 2008 ರಂದು ನ್ಯಾಯಯುತ ಜಾಗತೀಕರಣಕ್ಕಾಗಿ ಸಾಮಾಜಿಕ ನ್ಯಾಯ ಘೋಷಣೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು.


ಇದನ್ನೂ ಓದಿ; ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...