Homeಮುಖಪುಟಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

ಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

- Advertisement -
- Advertisement -

ಸಾಮಾಜಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ನ್ಯಾಯೋಚಿತ ಜಾಗತೀಕರಣಕ್ಕಾಗಿ ವಿಶ್ವ ಸಾಮಾಜಿಕ ನ್ಯಾಯ ದಿನದ ಘೋಷಣೆಗೆ ಸಹಿ ಹಾಕಿತು.

ವಿಶ್ವ ಸಾಮಾಜಿಕ ನ್ಯಾಯ ದಿನದ ಮೂಲಕ ಬಡತನ, ಜಾತಿ ಮತ್ತು ದೈಹಿಕ ತಾರತಮ್ಯ, ಅನಕ್ಷರತೆ, ಸಾಮಾಜಿಕ ಮತ್ತು ಧಾರ್ಮಿಕ ತಾರತಮ್ಯವನ್ನು ಹೋಗಲಾಡಿಸುವುದು ಹಾಗೂ ಸಮಸ್ಯೆ ಪರಿಹರಿಸುವುದು ಪ್ರಮುಖ ಉದ್ದೇಶಗಳಾಗಿವೆ.

ಪ್ರತಿ ವರ್ಷ ಒಂದೊಂದು ಸದುದ್ದೇಶದೊಂದಿಗೆ ಈ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. 2022 ರ ವಿಶ್ವ ನ್ಯಾಯ ದಿನದ ಥೀಮ್ ‘ಔಪಚಾರಿಕ ಉದ್ಯೋಗದ ಮೂಲಕ ಸಾಮಾಜಿಕ ನ್ಯಾಯವನ್ನು ಸಾಧಿಸುವುದಾಗಿದೆ. ಕಳೆದ ವರ್ಷದ ಥೀಮ್ ‘ಡಿಜಿಟಲ್ ಆರ್ಥಿಕತೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಒಂದು ಕರೆ’ ಎಂಬುದಾಗಿತ್ತು.

ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಆರ್ಥಿಕ ಬೆಳವಣಿಗೆ, ಲಿಂಗ ಸಮಾನತೆ ಮತ್ತು ಮಾನವನ ಸಾರ್ವತ್ರಿಕ ಸಮಾನತೆ ಸಾಧಿಸುವ ಗುರಿಯೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನ ಘೋಷಣೆಯ ಹಿಂದಿನ ಆಲೋಚನೆಯಾಗಿದೆ.

ಬಡತನ, ನಿರುದ್ಯೋಗ, ಸಾಮಾಜಿಕ ಉನ್ನತಿ, ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆಯಂಥ ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಗುರುತಿಸುವ ಅಗತ್ಯವನ್ನು ಅಂಗೀಕರಿಸುವುದು. ಸಾಮಾಜಿಕ ಏಕೀಕರಣ ಮತ್ತು ಉದ್ಯೋಗದ ಗುರಿಯನ್ನು ಸಾಧಿಸುವತ್ತ ಗಮನಹರಿಸುವುದು. ಸಾಮಾಜಿಕ ಜವಾಬ್ದಾರಿಗಳು, ನ್ಯಾಯ ಮತ್ತು ಬಡತನ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಜನರನ್ನು ಪ್ರೋತ್ಸಾಹಿಸುವುದಾಗಿದೆ.

ಇಂದು ವಿಶ್ವದ ರಾಷ್ಟ್ರ ರಾಷ್ಟ್ರಗಳ ನಡುವೆ ಅಸಮಾನತೆ ಹೆಚ್ಚುತ್ತಿದೆ. ಕೆಲ ಮುಂದುವರಿದ ರಾಷ್ಟ್ರಗಳು ಇತರ ರಾಷ್ಟ್ರಗಳನ್ನು ತಮ್ಮ ಕಪಿಮುಷ್ಟಿಯಲ್ಲಿಟ್ಟುಕೊಂಡು ಶೋಷಿಸುತ್ತಿವೆ. ಜಾಗತೀಕರಣದಿಂದಾಗಿ ತೃತೀಯ ಜಗತ್ತಿನ ರಾಷ್ಟ್ರಗಳನ್ನು ತಮ್ಮ ಮಾರುಕಟ್ಟೆಯನ್ನಾಗಿ ಮಾಡಿಕೊಳ್ಳುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇಂತಹ ಸಮಸ್ಯೆಗಳನ್ನು ಚರ್ಚಿಸಲು ಸಾಮಾಜಿಕ ನ್ಯಾಯ ದಿನಗಳು ಉಪಯೋಗವಾಗಬೇಕಿವೆ.

ಸಾಮಾಜಿಕ ನ್ಯಾಯದ ವಿಶ್ವ ದಿನದ ಇತಿಹಾಸ:

ಜನರಲ್ ಅಸೆಂಬ್ಲಿ ತನ್ನ 63 ನೇ ಅಧಿವೇಶನದಲ್ಲಿ ನವೆಂಬರ್ 26, 2007 ರಂದು, ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅಂದಿನಿಂದ, ಪ್ರತಿ ವರ್ಷ ಫೆಬ್ರವರಿ 20 ನ್ನು ವಿಶ್ವದಾದ್ಯಂತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ 10ನೇ ಜೂನ್ 2008 ರಂದು ನ್ಯಾಯಯುತ ಜಾಗತೀಕರಣಕ್ಕಾಗಿ ಸಾಮಾಜಿಕ ನ್ಯಾಯ ಘೋಷಣೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು.


ಇದನ್ನೂ ಓದಿ; ಜಾಮೀನು ನಿರಾಕರಿಸುವಾಗ ಹಿಂದಿ ರಾಷ್ಟ್ರೀಯ ಭಾಷೆಯೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್: ಸುಪ್ರೀಂ ಮೆಟ್ಟಿಲೇರಿದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...