Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...