Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...