Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...