Homeಮುಖಪುಟಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : 'ಕವಿರತ್ನ ಕಾಳಿದಾಸ' ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ಭೋಜರಾಜರನ್ನು ನೋಡಲು ಬಂದ ಎನ್‍ಟಿಆರ್! : ‘ಕವಿರತ್ನ ಕಾಳಿದಾಸ’ ಚಿತ್ರೀಕರಣ ನೆನೆದ ಶ್ರೀನಿವಾಸಮೂರ್ತಿ

ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆಯ ಶ್ರೀನಿವಾಸಮೂರ್ತಿಯವರು ಇಂದು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. 'ಕವಿರತ್ನ ಕಾಳಿದಾಸ' ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

- Advertisement -
- Advertisement -

ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಶ್ರೀನಿವಾಸಮೂರ್ತಿ ಕನ್ನಡ ಚಿತ್ರರಂಗದ ನಾಯಕನಟನಾಗಿ ಗುರುತಿಸಿಕೊಳ್ಳಬೇಕಿತ್ತು. ಪ್ರತಿಭೆ ಜೊತೆಗೆ ಅಗತ್ಯವಿದ್ದ ಅದೃಷ್ಟ ಅವರಿಗೆ ಪೂರ್ಣ ಪ್ರಮಾಣದಲ್ಲಿ ಒಲಿಯಲಿಲ್ಲವೇನೋ? ಇದರ ಲಾಭವಾಗಿದ್ದು ಮಾತ್ರ ಪೋಷಕ  ಪಾತ್ರಗಳಿಗೆ! ತಾವು ನಿರ್ವಹಿಸಿದ ಪೋಷಕ ಪಾತ್ರಗಳಿಗೆ ಅವರು ಜೀವ ತುಂಬಿದರು. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಯ ದಟ್ಟ ಅನುಭವದ ಹಿನ್ನೆಲೆ ಅವರದು. ಇಂದು ಅವರು 72ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ‘ಕವಿರತ್ನ ಕಾಳಿದಾಸ’ ಚಿತ್ರದ ಚಿತ್ರೀಕರಣ ಸಂದರ್ಭವೊಂದನ್ನು ಅವರಿಲ್ಲಿ ನೆನಪು ಮಾಡಿಕೊಂಡಿದ್ದಾರೆ.

***

  • ಶ್ರೀನಿವಾಸಮೂರ್ತಿ

ನಿರೂಪಣೆ: ಶಶಿಧರ ಚಿತ್ರದುರ್ಗ

‘ಕವಿರತ್ನ ಕಾಳಿದಾಸ’ ಚಿತ್ರದ ಸಂದರ್ಭ. ಭೋಜರಾಜನ ಪಾತ್ರಕ್ಕೆ ಪ್ರಮುಖ ನಟರ ಹೆಸರುಗಳ ಪ್ರಸ್ತಾಪವಾದ ನಂತರ ಅಂತಿಮವಾಗಿ ನಾನು ಆಯ್ಕೆಯಾದೆ. ನಾಟಕಗಳಲ್ಲಿ ನನ್ನನ್ನು ನೋಡಿದ್ದ ವರದಪ್ಪನವರು (ರಾಜ್ ಸಹೋದರ) ಪಾತ್ರಕ್ಕೆ ನಾನೇ ಸೂಕ್ತವೆಂದು ನನ್ನ ಆಯ್ಕೆಗೆ ಬಲವಾದ ಶಿಫಾರಸು ಮಾಡಿದ್ದರು. ಮದರಾಸಿನ ಸ್ಟುಡಿಯೋವೊಂದರ ಬಿ ಫ್ಲೋರ್’ನಲ್ಲಿ ‘ಕವಿರತ್ನ ಕಾಳಿದಾಸ’ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಪಕ್ಕದ ಎಫ್ ಫ್ಲೋರ್’ನಲ್ಲಿ ಎನ್.ಟಿ.ರಾಮರಾವ್ ಅವರ ’ವೈಯಾರಿ ಭಾಮಲು ವಗಲಮಾರಿ ಭರ್ತಲು’ ಶೂಟಿಂಗ್ ನಡೆಯುತ್ತಿತ್ತು.

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಎನ್‍ಟಿಆರ್ ಅವರನ್ನು ನೋಡಲು ರಾಜ್ ಅಲ್ಲಿಗೆ ಹೋಗಿದ್ದರು. ನಮ್ಮ ಚಿತ್ರದ ಬಗ್ಗೆ ವಿಚಾರಿಸಿಕೊಂಡ ಎನ್‍ಟಿಆರ್, ಭೋಜರಾಜನ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ವಿಚಾರಿಸಿದ್ದಾರೆ.  ’ಶ್ರೀನಿವಾಸಮೂರ್ತಿ ಅಂತ ಸ್ಟೇಜ್ ಆ್ಯಕ್ಟರ್ರು..’ ಎಂದಿದ್ದಾರೆ ರಾಜ್. ’ಐ ವಾಂಟ್ ಟು ಸೀ ಹಿಮ್’ ಎಂದು ಎನ್‍ಟಿಆರ್, ರಾಜ್ ಜೊತೆಗೂಡಿ ನಮ್ಮ ಫ್ಲೋರ್’ ಗೆ ಬಂದಿದ್ದಾರೆ. ನಾನು ದರ್ಬಾರ್ ಸೆಟ್‍ನ ಕಂಬದ ಹಿಂದೆ ಅಡಗಿಕೊಂಡು ಲೆಜೆಂಡರಿ ನಟ ಎನ್‍ಟಿಆರ್ ಅವರನ್ನು ನೋಡುತ್ತಾ ನಿಂತಿದ್ದೆ. ಅವರಿಗೆ ನನ್ನನ್ನು ಪರಿಚಯಿಸಲು ರಾಜ್ ಕರೆಯುತ್ತಿದ್ದಂತೆ, ಸಂಕೋಚದಿಂದ ಬಂದು ಎನ್‍ಟಿಆರ್ ಕಾಲಿಗೆರಗಿ ತೆಲುಗಿನಲ್ಲೇ ಮಾತನಾಡಿಸಿದೆ.

’ಕವಿರತ್ನ ಕಾಳಿದಾಸ’ ಸೆಟ್‍ಗೆ ಎನ್‍ಟಿಆರ್ ಭೇಟಿ ಕೊಟ್ಟ ಸಂದರ್ಭ. ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ

’ತೆಲುಗಿನಲ್ಲಿ ಕಾಳಿದಾಸ ಪಾತ್ರವನ್ನು ನಾಗೇಶ್ವರರಾವ್ ಮಾಡಿದ್ದಾರೆ. ಭೋಜರಾಜನ ಪಾತ್ರವನ್ನು ರಂಗರಾಯರು ಮಾಡಿದ್ದರು. ಅವರು ಬಹಳ ದೊಡ್ಡ ನಟ. ಅಂಥ ಪಾತ್ರವನ್ನು ಕನ್ನಡದಲ್ಲಿ ನೀವು ಮಾಡುತ್ತಿದ್ದೀರಿ. ಐ ವಾಂಟೆಂಡ್ ಟು ಕಂಗ್ರಾಚ್ಯುಯೇಟ್ ಯೂ. ಕಮ್, ಲೆಟ್ ಅಸ್ ಹ್ಯಾವ್ ಎ ಸ್ನ್ಯಾಪ್’ ಎಂದು ಎನ್‍ಟಿಆರ್ ಹೇಳಿದಾಗ ನನಗೆ ಮಾತೇ ಹೊರಡಲಿಲ್ಲ. ಕಲಾವಿದನಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೇನಿದೆ ಎಂದುಕೊಳ್ಳುತ್ತಾ ಫೋಟೋಗೆಂದು ಅವರ ಹಿಂದೆ ನಿಂತೆ!

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...