Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...