Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...