Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...