Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...