Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...