Homeಕರ್ನಾಟಕಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು...

ಇಂದು ತುಮಕೂರಿಗೆ ಮೋದಿ: ಗಾಡಿ ನಿಲ್ಸಬೇಡಿ ಅನ್ನೋ ಬದಲುಬಾಗಿಲು ಹಾಕಿ ಅಂದಿದ್ರೆ ಆಗಿತ್ತು…

- Advertisement -
- Advertisement -

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಾಗಿ ಎಲ್ಲೆಡೆ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಸರ್ಕಾರಿ ಪದವಿಪೂರ್ವ ಕಾಲೇಜು ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಇದು ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕೆರಳುವಂತೆ ಮಾಡಿದೆ. ವ್ಯಾಪಾರಕ್ಕೂ ಸಾರ್ವಜನಿಕರು ವಾಹನ ನಿಲ್ಲಿಸುವುದಕ್ಕೂ ತೊಂದರೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಹೊನ್ನಾವರ ರಸ್ತೆ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಸಿದ್ದಗಂಗಾ ಮಠದಿಂದ ರಸ್ತೆಯ ಎರಡೂ ಬದಿಗೆ ಕಬ್ಬಿಣದ ಸಲಾಕೆಗಳನ್ನು ಕಟ್ಟಿ ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಕ್ರಮ ವಹಿಸಿದ್ದು ವಾಹನ ಮತ್ತು ಜನ ಸಂದಣಿ ಇಲ್ಲದೆ ಅಘೋಷಿತ ಬಂದ್ ಆಚರಣೆಯಲ್ಲಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಬಿ.ಎಚ್.ರಸ್ತೆಯಲ್ಲಿನ ವ್ಯಾಪಾರ ವಹಿವಾಟು ಸ್ಥಬ್ದವಾಗಿದೆ.

ಬಿ.ಎಚ್.ರಸ್ತೆಯಲ್ಲೂ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಟೌನ್ ಹಾಲ್, ಆಶೋಕ ರಸ್ತೆ, ಸೋಮೇಶ್ವರಪುರಂ, ಎಸ್.ಐ.ಟಿ ಮುಖ್ಯರಸ್ತೆ, ಜನರಲ್ ಕಾರಿಯಪ್ಪ ರಸ್ತೆ, ಉಪ್ಪಾರಹಳ್ಳಿ ರಸ್ತೆ ಹೀಗೆ ಪ್ರಮುಖ ವ್ಯಾಪಾರ ನಡೆಯುವ ಜಾಗಗಳಲ್ಲೇ ವಾಹನ ನಿಲುಗಡೆಗೆ ನಿರ್ಬಂಧ ಹಾಕಿರುವುದರಿಂದ ವ್ಯಾಪಾರದ ಮೇಲೆ ಭಾರಿ ಹೊಡೆತ ಬೀಳಲಿದೆ ಎಂಬುದು ವ್ಯಾಪಾರಿಗಳು ಅಳಲು. ಅದೇ ಕಾರಣಕ್ಕೆ ವಾಹನ ನಿಲ್ಲಿಸಬೇಡಿ ಎನ್ನುವ ಬದಲು ಅಂಗಡಿ ಬಾಗಿಲು ಹಾಕಿ ಅಂದ್ರೆ ಆಗಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಕಾರ್ಯಕ್ರಮ ನಡೆಯೋದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ. ಇಲ್ಲಿಗೆ ಒಂದು ಕಿಲೋಮೀಟರ್ ದೂರವಾಗುತ್ತೆ. ಅಲ್ಲಿ ನಡೆಯೋ ಕಾರ್ಯಕ್ರಮಕ್ಕೆ ಇಲ್ಲೇಕೆ ವಾಹನ ನಿಲ್ಸಬಾರ್ದು. ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ. ಅವರೆಲ್ಲಿ ನಿಲ್ಲಿಸಬೇಕು ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರ ಜೊತೆಗೆ ಬಿ.ಎಚ್. ರಸ್ತೆಯ ಸಿದ್ದಗಂಗಾ ಆಸ್ಪತ್ರೆಗೆ ಯಾರೂ ಹೋಗಲು ಸಾಧ್ಯವಾಗುತ್ತಿಲ್ಲ. ಬಿ.ಎಚ್.ರಸ್ತೆಗೆ ಹೊಂದಿಕೊಂಡಂತೆ ಆಸ್ಪತ್ರೆ ಇರುವುದರಿಂದ ರೋಗಿಗಳನ್ನು ಕರೆತರುವ ವಾಹನಗಳು ಅಲ್ಲಿಗೆ ಪ್ರವೇಶಿಸಲು ಸಾಧ್ಯವಿಲ್ಲ.

ಸಂಚಾರಿ ಪೊಲೀಸ್ ವಾಹನಗಳು ರಸ್ತೆಗಳಲ್ಲಿ ಗಸ್ತುತಿರುಗುತ್ತ ವಾಹನಗಳನ್ನು ನಿಲ್ಲಿಸದಂತೆ ಮೈಕ್ ಮೂಲಕ ಹೇಳುತ್ತಿದ್ದಾರೆ. ರಸ್ತೆಯಲ್ಲಿ ಕಾವಲು ಕಾಯುತ್ತಿರುವ ಸಂಚಾರಿ ಪೊಲೀಸರು ಸಾರ್ವಜನಿಕರ ಬೈಗುಳ, ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿದೆ. ‘ಅಲ್ಲಾ ಸಾ ಅಲ್ಲೆಲ್ಲೋ ನಡೆಯೋ ಕಾರ್ಯಕ್ರಮಕ್ಕೆ ಇಲ್ಲ್ಯಾಕೆ ತೊಂದರೆ ಕೊಡ್ತೀರಾ, ಜನ ಎಲ್ಲಿ ನಿಲ್ಸಿಬೇಕು ಹೇಳಿ ಎಂದು ಜಗಳಕ್ಕೆ ಬೀಳುತ್ತಿದ್ದಾರೆ. ‘ಭದ್ರತೆಗಾಗಿ 3 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್‌ಪಿಜಿ ಕಮಾಂಡೋಗಳು ಕೂಡ ಕಾವಲಿಗೆ ಸಜ್ಜಾಗಿ ನಿಂತಿದ್ದಾರೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಖಾಸಗಿ ಬಸ್ ನಿಲ್ದಾಣವೂ ಇದಕ್ಕೆ ಭಿನ್ನವಾಗೇನೂ ಇಲ್ಲ. ಆಟೋ ಸಂಚಾರವೂ ಇಲ್ಲದಂತಾಗಿ ಜನರು ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಎಲ್ಲಿಗೆ ಹೋಗಬೇಕೆಂದರೂ ಸುತ್ತಿಬಳಸಿ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಬಟವಾಡಿಯಿಂದ ಟೌನ್ ಹಾಲ್ ವರೆಗೆ ಜಿರೋ ಟ್ರಾಫಿಕ್ ಇದೆ.

ರೈತ ಸಮಾವೇಶ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜು, ತುಮಕೂರು ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಸೈನ್ಸ್ ಮತ್ತು ಆರ್ಟ್ಸ್ ಕಾಲೇಜು, ಸಿದ್ದಗಂಗಾ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸಿದ್ದಗಂಗಾ ಪುರಷರ ಮತ್ತು ಮಹಿಳೆಯರ ಪದವಿ ಕಾಲೇಜು, ವಿದ್ಯಾನಿಕೇತನ,ಮಾರುತಿ ವಿದ್ಯಾ ಕೇಂದ್ರ ಹೀಗೆ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆಯನ್ನು ಘೋಷಿಸಿದೆ.

ಒಂದಂತೂ ಸತ್ಯ ನಗರ ಸ್ಥಬ್ದವಾಗಿದೆ. ಅಘೋಷಿತ ಬಂದ್ ಆಚರಣೆಯಲ್ಲಿದೆ. ಜನ ಕಿರಿಕಿರಿ ಅನುಭವಿಸುವಂತೆ ಆಗಿದೆ. ತುಮಕೂರಿನ ಮೇಲೆ ಪೊಲೀಸರು, ಎಸ್ಪಿಜಿ ಪಡೆ ಹದ್ದಿನ ಕಣ್ಣಿಟ್ಟಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...