Homeಮುಖಪುಟಪ್ರಧಾನಿ ಮೋದಿಯವರ ಜನ್ಮದಿನ: "ರಾಷ್ಟ್ರೀಯ ನಿರುದ್ಯೋಗ ದಿನ" ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಘೋಷಿಸಿ ಪ್ರಧಾನಿ ಮೋದಿ 2014 ರಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಆದರೆ ಇಂದು 'ಉದ್ಯೋಗ ಸೃಷ್ಟಿಯಾಗುವುದು ಬೇಡ, ಇರುವ ಉದ್ಯೋಗ ಉಳಿಸಿಕೊಂಡರೆ ಸಾಕು' ಎಂಬಂತಾಗಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಟ್ರೆಂಡಿಂಗ್ ಆಗಿತ್ತು. ಇಂದು ಮೋದಿಯವರ ಜನ್ಮದಿನ. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಭಾತರದಲ್ಲಿ ಕಳೆದ 45 ವರ್ಷಗಳ ಇತಿಹಾಸದಲ್ಲಿ ಈ ಪ್ರಮಾಣದ ನಿರುದ್ಯೋಗದ ಸಮಸ್ಯೆ ಸಂಭವಿಸಿರಲಿಲ್ಲ ಎಂದು ಹಲವು ತಜ್ಞರ ಅಭಿಪ್ರಾಯ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಘೋಷಿಸಿ ಪ್ರಧಾನಿ ಮೋದಿ 2014 ರಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಆದರೆ ಇಂದು ‘ಉದ್ಯೋಗ ಸೃಷ್ಟಿಯಾಗುವುದು ಬೇಡ, ಇರುವ ಉದ್ಯೋಗ ಉಳಿಸಿಕೊಂಡರೆ ಸಾಕು’ ಎಂಬಂತಾಗಿದೆ.

ಇದರ ಫಲವಾಗಿಯೇ ಇತ್ತೀಚಿನ ದಿನಗಳಲ್ಲಿ ಮೋದಿಯವರನ್ನು ಯುವಜನತೆ ತಿರಸ್ಕರಿಸುತ್ತಿರುವ ಕುರುಹುಗಳು ಹೆಚ್ಚಾಗಿ ಕಾಣುತ್ತಿದೆ. ಕಳೆದ ತಿಂಗಳಿನಲ್ಲಿ ಮೋದಿಯವರ ಮನ್‌ಕಿಬಾತ್‌ನಿಂದ ಆರಂಭವಾದ ಈ ತಿರಸ್ಕಾರ ಇಂದು ಅವರ ಹುಟ್ಟುಹಬ್ಬವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ಇನ್ನು ಟ್ವಿಟ್ಟರ್‌ನಲ್ಲಿ #NationalUnemploymentDay ಮತ್ತು #HappyBirthdayPMModi ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ, ಒಟ್ಟಾರೆ ಇಂದಿನ ದಿನವನ್ನು ನಿರುದ್ಯೋಗ ದಿನವೆಂದು ವಿವಿಧ ಭಾಷೆಗಳಲ್ಲಿ, ವಿವಿಧ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಟ್ವೀಟ್‌ಗಳನ್ನು ಮಾಡಿದ್ದಾರೆ. ಹಿಂದಿಯಲ್ಲಿ #राष्ट्रीय_बेरोजगार_दिवस ‘ರಾಷ್ಟ್ರೀಯ ಬೇರೋಜ್ಗಾರ್ ದಿವಸ್’ ಎಂದೂ ಟ್ರೆಂಡಿಂಗ್ ಆಗುತ್ತಿದೆ. ಭಾರತದ ಎಲ್ಲಾ ಭಾಷಗಳಲ್ಲಿಯೂ ‘ರಾಷ್ಟ್ರೀಯ ನಿರುದ್ಯೋಗ ದಿನ’ ಟ್ರೆಂಡಿಂಗ್ ಆರಂಭವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಫೇಸ್‌ಬುಕ್‌ನಲ್ಲಿಯೂ ಈ ಹ್ಯಾಶ್‌ಟ್ಯಾಗ್ ಬಳಸಿ ಟ್ರೆಂಡ್ ಮಾಡಲಾಗುತ್ತಿದೆ.

ಇಂದಿನ ಪ್ರತಿಭಟನೆಯ ಸ್ವರೂಪಗಳು ಬದಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿಯೇ ಪ್ರತಿಭಟಿಸುವ ಕಾಲ ಬಂದಿದೆ. ಸಂಘಟಿತ ಅಥವಾ ಅಸಂಘಟಿತವಾಗಿ ಕೆಲವು ಜನರು ತಮ್ಮ ಸಮಸ್ಯೆಯನ್ನು ಸರ್ಕಾರಕ್ಕೆ ಸತಲುಪಿಸುವ ಸಲುವಾಗಿ, ಸಾರ್ವಜನಿಕರ ಗಮನಕ್ಕೆ ತರುವ ಸಲುವಾಗಿ, ಬೆಂಬಲ ಪಡೆಯುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತದ ವಿರುದ್ಧ ಯುವಜನತೆ ತಿರುಗಿಬಿದ್ದಿರುವುದಕ್ಕೆ ಇಂದಿನ ಈ ಟ್ರೆಂಡಿಂಗ್ ಸಾಕ್ಷಿಯಾಗಿದೆ.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...