Homeಮುಖಪುಟಪ್ರಧಾನಿ ಮೋದಿಯವರ ಜನ್ಮದಿನ: "ರಾಷ್ಟ್ರೀಯ ನಿರುದ್ಯೋಗ ದಿನ" ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಘೋಷಿಸಿ ಪ್ರಧಾನಿ ಮೋದಿ 2014 ರಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಆದರೆ ಇಂದು 'ಉದ್ಯೋಗ ಸೃಷ್ಟಿಯಾಗುವುದು ಬೇಡ, ಇರುವ ಉದ್ಯೋಗ ಉಳಿಸಿಕೊಂಡರೆ ಸಾಕು' ಎಂಬಂತಾಗಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಟ್ರೆಂಡಿಂಗ್ ಆಗಿತ್ತು. ಇಂದು ಮೋದಿಯವರ ಜನ್ಮದಿನ. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಭಾತರದಲ್ಲಿ ಕಳೆದ 45 ವರ್ಷಗಳ ಇತಿಹಾಸದಲ್ಲಿ ಈ ಪ್ರಮಾಣದ ನಿರುದ್ಯೋಗದ ಸಮಸ್ಯೆ ಸಂಭವಿಸಿರಲಿಲ್ಲ ಎಂದು ಹಲವು ತಜ್ಞರ ಅಭಿಪ್ರಾಯ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಘೋಷಿಸಿ ಪ್ರಧಾನಿ ಮೋದಿ 2014 ರಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಆದರೆ ಇಂದು ‘ಉದ್ಯೋಗ ಸೃಷ್ಟಿಯಾಗುವುದು ಬೇಡ, ಇರುವ ಉದ್ಯೋಗ ಉಳಿಸಿಕೊಂಡರೆ ಸಾಕು’ ಎಂಬಂತಾಗಿದೆ.

ಇದರ ಫಲವಾಗಿಯೇ ಇತ್ತೀಚಿನ ದಿನಗಳಲ್ಲಿ ಮೋದಿಯವರನ್ನು ಯುವಜನತೆ ತಿರಸ್ಕರಿಸುತ್ತಿರುವ ಕುರುಹುಗಳು ಹೆಚ್ಚಾಗಿ ಕಾಣುತ್ತಿದೆ. ಕಳೆದ ತಿಂಗಳಿನಲ್ಲಿ ಮೋದಿಯವರ ಮನ್‌ಕಿಬಾತ್‌ನಿಂದ ಆರಂಭವಾದ ಈ ತಿರಸ್ಕಾರ ಇಂದು ಅವರ ಹುಟ್ಟುಹಬ್ಬವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ಇನ್ನು ಟ್ವಿಟ್ಟರ್‌ನಲ್ಲಿ #NationalUnemploymentDay ಮತ್ತು #HappyBirthdayPMModi ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ, ಒಟ್ಟಾರೆ ಇಂದಿನ ದಿನವನ್ನು ನಿರುದ್ಯೋಗ ದಿನವೆಂದು ವಿವಿಧ ಭಾಷೆಗಳಲ್ಲಿ, ವಿವಿಧ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಟ್ವೀಟ್‌ಗಳನ್ನು ಮಾಡಿದ್ದಾರೆ. ಹಿಂದಿಯಲ್ಲಿ #राष्ट्रीय_बेरोजगार_दिवस ‘ರಾಷ್ಟ್ರೀಯ ಬೇರೋಜ್ಗಾರ್ ದಿವಸ್’ ಎಂದೂ ಟ್ರೆಂಡಿಂಗ್ ಆಗುತ್ತಿದೆ. ಭಾರತದ ಎಲ್ಲಾ ಭಾಷಗಳಲ್ಲಿಯೂ ‘ರಾಷ್ಟ್ರೀಯ ನಿರುದ್ಯೋಗ ದಿನ’ ಟ್ರೆಂಡಿಂಗ್ ಆರಂಭವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಫೇಸ್‌ಬುಕ್‌ನಲ್ಲಿಯೂ ಈ ಹ್ಯಾಶ್‌ಟ್ಯಾಗ್ ಬಳಸಿ ಟ್ರೆಂಡ್ ಮಾಡಲಾಗುತ್ತಿದೆ.

ಇಂದಿನ ಪ್ರತಿಭಟನೆಯ ಸ್ವರೂಪಗಳು ಬದಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿಯೇ ಪ್ರತಿಭಟಿಸುವ ಕಾಲ ಬಂದಿದೆ. ಸಂಘಟಿತ ಅಥವಾ ಅಸಂಘಟಿತವಾಗಿ ಕೆಲವು ಜನರು ತಮ್ಮ ಸಮಸ್ಯೆಯನ್ನು ಸರ್ಕಾರಕ್ಕೆ ಸತಲುಪಿಸುವ ಸಲುವಾಗಿ, ಸಾರ್ವಜನಿಕರ ಗಮನಕ್ಕೆ ತರುವ ಸಲುವಾಗಿ, ಬೆಂಬಲ ಪಡೆಯುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತದ ವಿರುದ್ಧ ಯುವಜನತೆ ತಿರುಗಿಬಿದ್ದಿರುವುದಕ್ಕೆ ಇಂದಿನ ಈ ಟ್ರೆಂಡಿಂಗ್ ಸಾಕ್ಷಿಯಾಗಿದೆ.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...