Homeಮುಖಪುಟಪ್ರಧಾನಿ ಮೋದಿಯವರ ಜನ್ಮದಿನ: "ರಾಷ್ಟ್ರೀಯ ನಿರುದ್ಯೋಗ ದಿನ" ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಘೋಷಿಸಿ ಪ್ರಧಾನಿ ಮೋದಿ 2014 ರಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಆದರೆ ಇಂದು 'ಉದ್ಯೋಗ ಸೃಷ್ಟಿಯಾಗುವುದು ಬೇಡ, ಇರುವ ಉದ್ಯೋಗ ಉಳಿಸಿಕೊಂಡರೆ ಸಾಕು' ಎಂಬಂತಾಗಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಟ್ರೆಂಡಿಂಗ್ ಆಗಿತ್ತು. ಇಂದು ಮೋದಿಯವರ ಜನ್ಮದಿನ. ನಿರೀಕ್ಷೆಗೂ ಮೀರಿ ನೆಟ್ಟಿಗರು ಈ ಅಭಿಯಾನದಲ್ಲಿ ಪಾಲ್ಗೊಂಡು #NationalUnemploymentDay ಎಂಬ ಹ್ಯಾಶ್‌ಟ್ಯಾಗ್ ಬಳಸಿ ಲಕ್ಷಾಂತರ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಭಾತರದಲ್ಲಿ ಕಳೆದ 45 ವರ್ಷಗಳ ಇತಿಹಾಸದಲ್ಲಿ ಈ ಪ್ರಮಾಣದ ನಿರುದ್ಯೋಗದ ಸಮಸ್ಯೆ ಸಂಭವಿಸಿರಲಿಲ್ಲ ಎಂದು ಹಲವು ತಜ್ಞರ ಅಭಿಪ್ರಾಯ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಘೋಷಿಸಿ ಪ್ರಧಾನಿ ಮೋದಿ 2014 ರಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು. ಆದರೆ ಇಂದು ‘ಉದ್ಯೋಗ ಸೃಷ್ಟಿಯಾಗುವುದು ಬೇಡ, ಇರುವ ಉದ್ಯೋಗ ಉಳಿಸಿಕೊಂಡರೆ ಸಾಕು’ ಎಂಬಂತಾಗಿದೆ.

ಇದರ ಫಲವಾಗಿಯೇ ಇತ್ತೀಚಿನ ದಿನಗಳಲ್ಲಿ ಮೋದಿಯವರನ್ನು ಯುವಜನತೆ ತಿರಸ್ಕರಿಸುತ್ತಿರುವ ಕುರುಹುಗಳು ಹೆಚ್ಚಾಗಿ ಕಾಣುತ್ತಿದೆ. ಕಳೆದ ತಿಂಗಳಿನಲ್ಲಿ ಮೋದಿಯವರ ಮನ್‌ಕಿಬಾತ್‌ನಿಂದ ಆರಂಭವಾದ ಈ ತಿರಸ್ಕಾರ ಇಂದು ಅವರ ಹುಟ್ಟುಹಬ್ಬವನ್ನು ‘ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ತಮ್ಮ ಆಕ್ರೋಷವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ: ಟ್ವಿಟರ್‌ನಲ್ಲಿ #Govt_killed_Neet_students ಟ್ರೆಂಡಿಂಗ್!

ಇನ್ನು ಟ್ವಿಟ್ಟರ್‌ನಲ್ಲಿ #NationalUnemploymentDay ಮತ್ತು #HappyBirthdayPMModi ಟ್ರೆಂಡಿಂಗ್ ಆಗುತ್ತಿದ್ದು, ಈ ವರದಿ ಬರೆಯುವ ವೇಳೆಗೆ, ಒಟ್ಟಾರೆ ಇಂದಿನ ದಿನವನ್ನು ನಿರುದ್ಯೋಗ ದಿನವೆಂದು ವಿವಿಧ ಭಾಷೆಗಳಲ್ಲಿ, ವಿವಿಧ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಟ್ವೀಟ್‌ಗಳನ್ನು ಮಾಡಿದ್ದಾರೆ. ಹಿಂದಿಯಲ್ಲಿ #राष्ट्रीय_बेरोजगार_दिवस ‘ರಾಷ್ಟ್ರೀಯ ಬೇರೋಜ್ಗಾರ್ ದಿವಸ್’ ಎಂದೂ ಟ್ರೆಂಡಿಂಗ್ ಆಗುತ್ತಿದೆ. ಭಾರತದ ಎಲ್ಲಾ ಭಾಷಗಳಲ್ಲಿಯೂ ‘ರಾಷ್ಟ್ರೀಯ ನಿರುದ್ಯೋಗ ದಿನ’ ಟ್ರೆಂಡಿಂಗ್ ಆರಂಭವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಫೇಸ್‌ಬುಕ್‌ನಲ್ಲಿಯೂ ಈ ಹ್ಯಾಶ್‌ಟ್ಯಾಗ್ ಬಳಸಿ ಟ್ರೆಂಡ್ ಮಾಡಲಾಗುತ್ತಿದೆ.

ಇಂದಿನ ಪ್ರತಿಭಟನೆಯ ಸ್ವರೂಪಗಳು ಬದಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿಯೇ ಪ್ರತಿಭಟಿಸುವ ಕಾಲ ಬಂದಿದೆ. ಸಂಘಟಿತ ಅಥವಾ ಅಸಂಘಟಿತವಾಗಿ ಕೆಲವು ಜನರು ತಮ್ಮ ಸಮಸ್ಯೆಯನ್ನು ಸರ್ಕಾರಕ್ಕೆ ಸತಲುಪಿಸುವ ಸಲುವಾಗಿ, ಸಾರ್ವಜನಿಕರ ಗಮನಕ್ಕೆ ತರುವ ಸಲುವಾಗಿ, ಬೆಂಬಲ ಪಡೆಯುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದ್ದಾರೆ.

ಒಟ್ಟಿನಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತದ ವಿರುದ್ಧ ಯುವಜನತೆ ತಿರುಗಿಬಿದ್ದಿರುವುದಕ್ಕೆ ಇಂದಿನ ಈ ಟ್ರೆಂಡಿಂಗ್ ಸಾಕ್ಷಿಯಾಗಿದೆ.


ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...