Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...