Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...