Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...