Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...