Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...